ಕ್ರೀಡೆ

ಪಾಕಿಸ್ತಾನ ಆಟಗಾರರಲ್ಲಿ ಒಗ್ಗಟ್ಟಿಲ್ಲ: ವಿಶ್ವಕಪ್‌ ವಿಜೇತ ಕೋಚ್‌ ಗ್ಯಾರಿ ಕರ್ಸ್ಟನ್‌ ಬೇಸರ

ನವದೆಹಲಿ: ನನ್ನ ಕ್ರಿಕೆಟ್‌ ಕೋಚಿಂಗ್‌ ಜೀವನದಲ್ಲಿ ಇಂತಹ ತಂಡವೊಂದನ್ನು ನೋಡಿಯೇ ಇಲ್ಲ, ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರಲ್ಲಿ ಯಾವುದೇ ಒಗ್ಗಟ್ಟಿಲ್ಲ ಎಂದು 2011ರ ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌ ಆಗಿದ್ದ ಗ್ಯಾರಿ ಕರ್ಸ್ಟನ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೇರಿಕಾ, ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ನೀರಸ ಪ್ರದರ್ಶನ ತೋರಿತು. ಯುಎಸ್‌ಎ, ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸೋಲುವ ಮೂಲಕ ವಿಶ್ವಕಪ್‌ನ ಲೀಗ್‌ ಹಂತದಲ್ಲಿಯೇ ತನ್ನ ಅಭಿಯಾನವನ್ನು ಮುಗಿಸಿತು.

ಟಿ20 ವಿಶ್ವಕಪ್‌ ನ ಗುಂಪು ಹಂತದಿಂದಲೇ ಪಾಕಿಸ್ತಾನ ಹೊರಬಿದ್ದ ಬೆನ್ನಲ್ಲೇ ತಂಡದ ಮುಖ್ಯ ಕೋಚ್‌ ಗ್ಯಾರಿ ಕರ್ಸ್ಟನ್‌ ಈ ಹೇಳಿಕೆ ನೀಡಿದ್ದಾರೆ. ಆ ಮೂಲಕ ಪಾಕ್‌ ಕ್ರಿಕೆಟ್ ಮಂಡಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಭೀತಾಗಿದೆ.

ಪಾಕ್‌ ತಂಡದಲ್ಲಿ ಯಾವುದೇ ಒಗ್ಗಟ್ಟಿಲ್ಲ. ನಾವೆಲ್ಲರೂ ಒಂದು ತಂಡ ಎಂದು ಹೇಳಿಕೊಂಡರು ಆದರೆ ತಂಡವಾಗಿ ಪ್ರದರ್ಶನ ತೋರುವಲ್ಲಿ ವಿಫಲರಾದರು. ಎಲ್ಲರೂ ಬೇರೆ ಬೇರೆಯಾಗಿಯೇ ಇರುತ್ತಿದ್ದರು. ಒಬ್ಬರು ಇನ್ನೊಬ್ಬರ ನೆರವಿಗೆ ಬರುತ್ತಿರಲಿಲ್ಲ. ನಾನು ನಾನಾ ತಂಡಗಳಲ್ಲಿ ಕೆಲಸ ಮಾಡಿದ್ದೇನೆ. ಈ ರೀತಿಯ ತಂಡದ ಸ್ಥಿತಿಯನ್ನು ನಾನು ನೋಡಿಯೇ ಇಲ್ಲ ಎಂದು ಕರ್ಸ್ಟನ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಪಾಕ್‌ ಆಟಗಾರರಲ್ಲಿ ಸಾಮ್ಯತೆಯಿಲ್ಲ. ಕೌಶಲ ಮಟ್ಟದಲ್ಲಿ ತುಂಬಾ ಹಿಂದುಳಿದಿದ್ದಾರೆ. ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಜಿಯೋಸೂಪರ್‌.ಟಿವಿ4 ವರದಿ ಮಾಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

8 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

10 hours ago