ಕ್ರೀಡೆ

ಪಾಕಿಸ್ತಾನ ಆಟಗಾರರಲ್ಲಿ ಒಗ್ಗಟ್ಟಿಲ್ಲ: ವಿಶ್ವಕಪ್‌ ವಿಜೇತ ಕೋಚ್‌ ಗ್ಯಾರಿ ಕರ್ಸ್ಟನ್‌ ಬೇಸರ

ನವದೆಹಲಿ: ನನ್ನ ಕ್ರಿಕೆಟ್‌ ಕೋಚಿಂಗ್‌ ಜೀವನದಲ್ಲಿ ಇಂತಹ ತಂಡವೊಂದನ್ನು ನೋಡಿಯೇ ಇಲ್ಲ, ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರಲ್ಲಿ ಯಾವುದೇ ಒಗ್ಗಟ್ಟಿಲ್ಲ ಎಂದು 2011ರ ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌ ಆಗಿದ್ದ ಗ್ಯಾರಿ ಕರ್ಸ್ಟನ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೇರಿಕಾ, ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ನೀರಸ ಪ್ರದರ್ಶನ ತೋರಿತು. ಯುಎಸ್‌ಎ, ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸೋಲುವ ಮೂಲಕ ವಿಶ್ವಕಪ್‌ನ ಲೀಗ್‌ ಹಂತದಲ್ಲಿಯೇ ತನ್ನ ಅಭಿಯಾನವನ್ನು ಮುಗಿಸಿತು.

ಟಿ20 ವಿಶ್ವಕಪ್‌ ನ ಗುಂಪು ಹಂತದಿಂದಲೇ ಪಾಕಿಸ್ತಾನ ಹೊರಬಿದ್ದ ಬೆನ್ನಲ್ಲೇ ತಂಡದ ಮುಖ್ಯ ಕೋಚ್‌ ಗ್ಯಾರಿ ಕರ್ಸ್ಟನ್‌ ಈ ಹೇಳಿಕೆ ನೀಡಿದ್ದಾರೆ. ಆ ಮೂಲಕ ಪಾಕ್‌ ಕ್ರಿಕೆಟ್ ಮಂಡಳಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಭೀತಾಗಿದೆ.

ಪಾಕ್‌ ತಂಡದಲ್ಲಿ ಯಾವುದೇ ಒಗ್ಗಟ್ಟಿಲ್ಲ. ನಾವೆಲ್ಲರೂ ಒಂದು ತಂಡ ಎಂದು ಹೇಳಿಕೊಂಡರು ಆದರೆ ತಂಡವಾಗಿ ಪ್ರದರ್ಶನ ತೋರುವಲ್ಲಿ ವಿಫಲರಾದರು. ಎಲ್ಲರೂ ಬೇರೆ ಬೇರೆಯಾಗಿಯೇ ಇರುತ್ತಿದ್ದರು. ಒಬ್ಬರು ಇನ್ನೊಬ್ಬರ ನೆರವಿಗೆ ಬರುತ್ತಿರಲಿಲ್ಲ. ನಾನು ನಾನಾ ತಂಡಗಳಲ್ಲಿ ಕೆಲಸ ಮಾಡಿದ್ದೇನೆ. ಈ ರೀತಿಯ ತಂಡದ ಸ್ಥಿತಿಯನ್ನು ನಾನು ನೋಡಿಯೇ ಇಲ್ಲ ಎಂದು ಕರ್ಸ್ಟನ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಪಾಕ್‌ ಆಟಗಾರರಲ್ಲಿ ಸಾಮ್ಯತೆಯಿಲ್ಲ. ಕೌಶಲ ಮಟ್ಟದಲ್ಲಿ ತುಂಬಾ ಹಿಂದುಳಿದಿದ್ದಾರೆ. ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಜಿಯೋಸೂಪರ್‌.ಟಿವಿ4 ವರದಿ ಮಾಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago