ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ಸ್‌ ತಲುಪಬಲ್ಲ 4 ತಂಡಗಳನ್ನು ಆರಿಸಿದ ಗ್ಲೆನ್‌ ಮೆಗ್ರಾಥ್‌!

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಲೆಕ್ಕಾಚಾರಗಳ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಹಲವು ಮಾಜಿ ಕ್ರಿಕೆಟಿಗರು ಪ್ರಶಸ್ತಿ ಮುಡಿಗೇರಿಸಿಕೊಳ್ಳಬಲ್ಲ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಈಗಾಗಲೇ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್‌ ಮೆಗ್ರಾಥ್‌ ಅವರು, ಸೆಮಿಫೈನಲ್‌ ತಲುಪಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ.

ಇತ್ತೀಚೆಗೆ ಟೈಮ್ಸ್ ಆಫ್‌ ಇಂಡಿಯಾ ಜೊತೆ ಮಾತನಾಡಿದ್ದ ಗ್ಲೆನ್‌ ಮೆಗ್ರಾಥ್‌, ಈ ಬಾರಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಳನ್ನು ಆರಿಸಿದ್ದಾರೆ. ಆತಿಥೇಯ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ತಂಡಗಳು ಅಂತಿಮ ನಾಲ್ಕರಲ್ಲಿ ಪ್ರವೇಶ ಪಡೆಯಲಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಸೆಮಿಫೈನಲ್ಸ್ ಪ್ರವೇಶಿಸಬಲ್ಲ ನಾಲ್ಕು ತಂಡಗಳ ಪೈಕಿ ಆಸ್ಟ್ರೇಲಿಯಾ ಕೂಡ ಇರಲಿದೆ ಎಂಬುದರಲ್ಲಿ ನನಗೆ ಯಾವುದೇ ಅಚ್ಚರಿ ಇಲ್ಲ. ನಿಸ್ಸಂಶವಾಗಿ ಭಾರತ ತಂಡ ತನ್ನ ತವರು ನೆಲದಲ್ಲಿ ಆಡುತ್ತಿದೆ. ಇಂಗ್ಲೆಂಡ್‌ ತಂಡ ಅತ್ಯುತ್ತಮ ಕ್ರಿಕೆಟ್‌ ಆಡುತ್ತಿದೆ ಹಾಗೂ ಪಾಕಿಸ್ತಾನ ಕೂಡ ಅದ್ಭುತ ಪ್ರದರ್ಶನ ತೋರುತ್ತಿದೆ. ಈ ಮೇಲಿನ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆಯಲಿವೆ,” ಎಂದು ಮೆಗ್ರಾಥ್‌ ಭವಿಷ್ಯ ನುಡಿದಿದ್ದಾರೆ.

ಜಸ್‌ಪ್ರೀತ್‌ ಬುಮ್ರಾ ಕೀ ಪ್ಲೆಯರ್‌ ಎಂದ ಮೆಗ್ರಾಥ್‌ : ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಿನಿಂದ ಇಲ್ಲಿಯವೆರಗೂ ಜಸ್‌ಪ್ರೀತ್‌ ಬುಮ್ರಾ ಗಾಯದಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇದೀಗ ಅವರು ಸಂಪೂರ್ಣ ಫಿಟ್‌ನೆಸ್‌ಗೆ ಮರಳಿದ್ದು, ಐರ್ಲೆಂಡ್‌ ವಿರುದ್ಧ ಮುಂಬರುವ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ವಿಶ್ವಕಪ್‌ ಟೂರ್ನಿಗೂ ಮುನ್ನ ಅವರ ಫಿಟ್ನೆಸ್‌ ಪರೀಕ್ಷೆ ನಡೆಯಲಿದೆ. ಭಾರತೀಯ ಪಿಚ್‌ಗಳಲ್ಲಿ ಬುಮ್ರಾ ಅದ್ಬುತ ಪ್ರದರ್ಶನ ತೋರುತ್ತಾರೆ. ಇವರು ಪುಟಿದರೆ ಭಾರತ ತಂಡ ವಿಶ್ವದ ಎಲ್ಲಾ ಕಡೆ ಜಯಿಸಲಿದೆ ಎಂದು ಮೆಗ್ರಾಥ್‌ ತಿಳಿಸಿದ್ದಾರೆ.

“ಫಾಸ್ಟ್ ಬೌಲರ್‌ಗಳಿಗೆ ಭಾರತದ ಪಿಚ್‌ಗಳು ಅತ್ಯಂತ ಕಠಿಣವಾಗಿವೆ. ಬೌಲರ್‌ಗಳಿಗೆ ಇಲ್ಲಿ ಉತ್ತಮ ಪ್ರದರ್ಶನ ತೋರುವುದು ಸುಲಭವಲ್ಲ. ಆದರೆ, ಭಾರತದಿಂದ ಇತ್ತೀಚಿನ ದಿನಗಳಲ್ಲಿ ಬರುತ್ತಿರುವ ವೇಗದ ಬೌಲರ್‌ಗಳನ್ನು ನಾವು ಹಿಂದೆಂದೂ ನೋಡಿರಲಿಲ್ಲ. ಏಕೆಂದರೆ ಮೊದಲು ಇಲ್ಲಿ ವೇಗದ ಬೌಲರ್‌ಗಳು ಕೇಂದ್ರಿಕೃತವಾಗಿರಲಿಲ್ಲ. ಇಲ್ಲಿ ಯಶಸ್ವಿಯಾಗುವ ವೇಗದ ಬೌಲರ್‌ ವಿಶ್ವದ ಎಲ್ಲಾ ಕಡೆ ಯಶಸ್ವಿಯಾಗುತ್ತಾರೆ,” ಎಂದು ಗ್ಲೆನ್‌ ಮೆಗ್ರಾಥ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್‌ 5 ರಿಂದ ಏಕದಿನ ವಿಶ್ವಕಪ್‌ ಆರಂಭ : ಮುಂಬರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯು ಅಕ್ಟೋಬರ್‌ 5 ರಿಂದ ಆರಂಭವಾಗಲಿದೆ. ಇದೇ ಮೊದಲ ಬಾರಿ ಭಾರತದ ಪೂರ್ಣ ಪ್ರಮಾಣದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್‌ ನಡೆಯಲಿದ್ದು, ನವೆಂಬರ್‌ 19 ರಂದು ಫೈನಲ್‌ ಮೂಲಕ ಟೂರ್ನಿಗೆ ತೆರೆ ಬೀಳಲಿದೆ. ಇದಕ್ಕೂ ಮುನ್ನ 2011ರಲ್ಲಿ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಜೊತೆ ಭಾರತ ಜಂಟಿಯಾಗಿ ಏಕದಿನ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿತ್ತು.

ರೌಂಡ್‌ರಾಬಿನ್‌ ಲೀಗ್‌ ಪಂದ್ಯಗಳು : ಏಕದಿನ ವಿಶ್ವಕಪ್‌ ಟೂರ್ನಿಯ ಲೀಗ್‌ ಪಂದ್ಯಗಳು ರೌಂಡ್‌ ರಾಬಿನ್‌ ಮಾದರಿಯಲ್ಲಿ ನಡೆಯಲಿದೆ. ಹೈದರಾಬಾದ್‌, ಅಹಮದಾಬಾದ್‌, ಧರ್ಮಶಾಲಾ, ದಿಲ್ಲಿ, ಚೆನ್ನೈ, ಲಖನೌ, ಪುಣೆ, ಬೆಂಗಳೂರು, ಮುಂಬೈ ಹಾಗೂ ಕೋಲ್ಕತಾದಲ್ಲಿ ಪಂದ್ಯಗಳು ನಡೆಯಲಿವೆ. ಮುಂಬೈ ಹಾಗೂ ಕೋಲ್ಕತಾದಲ್ಲಿ ಸೆಮಿಫೈನಲ್ಸ್‌ ಪಂದ್ಯಗಳು ನಡೆಯಲಿವೆ. ಇನ್ನು ಫೈನಲ್‌ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ.

andolanait

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

9 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

12 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

12 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

14 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

15 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

16 hours ago