ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ನೀರಜ್ ತಮ್ಮದೇ ಕ್ರೀಡಾಪಟು ನಿರ್ವಹಣಾ ಸಂಸ್ಥೆ ‘ವೆಲ್ ಸ್ಪೋರ್ಟ್ಸ್’ ಅನ್ನು ಪ್ರಾರಂಭಿಸಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿದ್ದಾರೆ.
JSW ಸ್ಪೋರ್ಟ್ಸ್ ಜೊತೆಗಿನ ನೀರಜ್ ಅವರ ಸಂಪರ್ಕ 2016ರಲ್ಲಿ ಆರಂಭವಾಗಿದ್ದು, JSW ಸ್ಪೋರ್ಟ್ಸ್ ಎಕ್ಸಲೆನ್ಸ್ ಪ್ರೋಗ್ರಾಂ (SEP) ಮೂಲಕ ಅವರನ್ನು ಮೊಟ್ಟಮೊದಲಾಗಿ ಗುರುತಿಸಲಾಯಿತು.
ಟೋಕಿಯೋ 2020 ಒಲಿಂಪಿಕ್ಸ್ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯರಾಗಿರುವ ನೀರಜ್, 2023ರಲ್ಲಿ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಹಾಗೂ 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಜೊತೆಗೆ ಜಾಗತಿಕ ವೇದಿಕೆಯಲ್ಲಿ ಅನೇಕ ಪೋಡಿಯಂ ಸಾಧನೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ನೀರಜ್ ಇದೀಗ ‘ವೆಲ್ ಸ್ಪೋರ್ಟ್ಸ್’ ಮೂಲಕ ಉದ್ಯಮ ಲೋಕಕ್ಕೆ ಕಾಲಿಡುತ್ತಿದ್ದು, ಈ ಬೆಳವಣಿಗೆಯನ್ನು ರೂಪಿಸಲು JSW ಸ್ಪೋರ್ಟ್ಸ್ ಅವರೊಂದಿಗೆ ಕೈಜೋಡಿಸಿದೆ. ಈ ಕುರಿತು ಮಾತನಾಡಿದ JSW ಸ್ಪೋರ್ಟ್ಸ್ನ ಸಿಇಒ ದಿವ್ಯಾಂಶು ಸಿಂಗ್, “ನೀರಜ್ ಅವರೊಂದಿಗೆ ಕೆಲಸ ಮಾಡುವುದು JSW ಸ್ಪೋರ್ಟ್ಸ್ನ ಎಲ್ಲರಿಗೂ ಅದ್ಭುತ ಅನುಭವವಾಗಿತ್ತು. ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ನಾವು ಹಾರ್ದಿಕ ಶುಭಾಶಯಗಳನ್ನು ಕೋರುತ್ತೇವೆ,” ಎಂದು ಹೇಳಿದರು.
ನೀರಜ್ ಚೋಪ್ರಾ ಮಾತನಾಡಿ, “ನನ್ನ ವೃತ್ತಿಜೀವನದಲ್ಲಿ JSW ಸ್ಪೋರ್ಟ್ಸ್ ನಿರ್ಣಾಯಕ ಪಾತ್ರವಹಿಸಿದೆ. ಅವರ ಬೆಂಬಲ ಮತ್ತು ದೃಷ್ಟಿಕೋನಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ,” ಎಂದರು.
ನೀರಜ್ ಹೊಸ ಉದ್ಯಮಶೀಲ ಅಧ್ಯಾಯವನ್ನು ಆರಂಭಿಸುತ್ತಿರುವ ಈ ಸಂದರ್ಭದಲ್ಲಿ, ಎರಡೂ ಪಕ್ಷಗಳು ಪರಸ್ಪರ ಆಳವಾದ ಗೌರವ ಮತ್ತು ಹೆಮ್ಮೆಯೊಂದಿಗೆ ವಿದಾಯವಾಗುತ್ತಿವೆ. JSW ಸ್ಪೋರ್ಟ್ಸ್ ಭಾರತದ ಅತ್ಯಂತ ಭರವಸೆಯ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ತನ್ನ ಧ್ಯೇಯವನ್ನು ಮುಂದುವರಿಸುತ್ತಿದ್ದು, ಇದು ಭಾರತೀಯ ಕ್ರೀಡೆಯ ಭವಿಷ್ಯವನ್ನು ಪ್ರೇರೇಪಿಸುವ ಬಲವಾದ ಆಧಾರವಾಗಿರಲಿದೆ.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್ ಪಾರ್ಟಿ ಮೂಲಕ…
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…