ಕ್ರೀಡೆ

ʻವೆಲ್ ಸ್ಪೋರ್ಟ್ಸ್ʼ ಮೂಲಕ ಹೊಸ ಅಧ್ಯಾಯ ಆರಂಭಿಸಿದ ಚಿನ್ನದ ಹುಡುಗ ʼನೀರಜ್ ಚೋಪ್ರಾʼ

ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ನೀರಜ್ ತಮ್ಮದೇ ಕ್ರೀಡಾಪಟು ನಿರ್ವಹಣಾ ಸಂಸ್ಥೆ ‘ವೆಲ್ ಸ್ಪೋರ್ಟ್ಸ್’ ಅನ್ನು ಪ್ರಾರಂಭಿಸಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿದ್ದಾರೆ.

JSW ಸ್ಪೋರ್ಟ್ಸ್ ಜೊತೆಗಿನ ನೀರಜ್ ಅವರ ಸಂಪರ್ಕ 2016ರಲ್ಲಿ ಆರಂಭವಾಗಿದ್ದು, JSW ಸ್ಪೋರ್ಟ್ಸ್ ಎಕ್ಸಲೆನ್ಸ್ ಪ್ರೋಗ್ರಾಂ (SEP) ಮೂಲಕ ಅವರನ್ನು ಮೊಟ್ಟಮೊದಲಾಗಿ ಗುರುತಿಸಲಾಯಿತು.

ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯರಾಗಿರುವ ನೀರಜ್, 2023ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಹಾಗೂ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಜೊತೆಗೆ ಜಾಗತಿಕ ವೇದಿಕೆಯಲ್ಲಿ ಅನೇಕ ಪೋಡಿಯಂ ಸಾಧನೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ನೀರಜ್ ಇದೀಗ ‘ವೆಲ್ ಸ್ಪೋರ್ಟ್ಸ್’ ಮೂಲಕ ಉದ್ಯಮ ಲೋಕಕ್ಕೆ ಕಾಲಿಡುತ್ತಿದ್ದು, ಈ ಬೆಳವಣಿಗೆಯನ್ನು ರೂಪಿಸಲು JSW ಸ್ಪೋರ್ಟ್ಸ್ ಅವರೊಂದಿಗೆ ಕೈಜೋಡಿಸಿದೆ. ಈ ಕುರಿತು ಮಾತನಾಡಿದ JSW ಸ್ಪೋರ್ಟ್ಸ್‌ನ ಸಿಇಒ ದಿವ್ಯಾಂಶು ಸಿಂಗ್, “ನೀರಜ್ ಅವರೊಂದಿಗೆ ಕೆಲಸ ಮಾಡುವುದು JSW ಸ್ಪೋರ್ಟ್ಸ್‌ನ ಎಲ್ಲರಿಗೂ ಅದ್ಭುತ ಅನುಭವವಾಗಿತ್ತು. ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ನಾವು ಹಾರ್ದಿಕ ಶುಭಾಶಯಗಳನ್ನು ಕೋರುತ್ತೇವೆ,” ಎಂದು ಹೇಳಿದರು.

ನೀರಜ್ ಚೋಪ್ರಾ ಮಾತನಾಡಿ, “ನನ್ನ ವೃತ್ತಿಜೀವನದಲ್ಲಿ JSW ಸ್ಪೋರ್ಟ್ಸ್ ನಿರ್ಣಾಯಕ ಪಾತ್ರವಹಿಸಿದೆ. ಅವರ ಬೆಂಬಲ ಮತ್ತು ದೃಷ್ಟಿಕೋನಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ,” ಎಂದರು.

ನೀರಜ್ ಹೊಸ ಉದ್ಯಮಶೀಲ ಅಧ್ಯಾಯವನ್ನು ಆರಂಭಿಸುತ್ತಿರುವ ಈ ಸಂದರ್ಭದಲ್ಲಿ, ಎರಡೂ ಪಕ್ಷಗಳು ಪರಸ್ಪರ ಆಳವಾದ ಗೌರವ ಮತ್ತು ಹೆಮ್ಮೆಯೊಂದಿಗೆ ವಿದಾಯವಾಗುತ್ತಿವೆ. JSW ಸ್ಪೋರ್ಟ್ಸ್ ಭಾರತದ ಅತ್ಯಂತ ಭರವಸೆಯ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ತನ್ನ ಧ್ಯೇಯವನ್ನು ಮುಂದುವರಿಸುತ್ತಿದ್ದು, ಇದು ಭಾರತೀಯ ಕ್ರೀಡೆಯ ಭವಿಷ್ಯವನ್ನು ಪ್ರೇರೇಪಿಸುವ ಬಲವಾದ ಆಧಾರವಾಗಿರಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

13 mins ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

18 mins ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

23 mins ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

36 mins ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

2 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

3 hours ago