ಕ್ರೀಡೆ

ʻವೆಲ್ ಸ್ಪೋರ್ಟ್ಸ್ʼ ಮೂಲಕ ಹೊಸ ಅಧ್ಯಾಯ ಆರಂಭಿಸಿದ ಚಿನ್ನದ ಹುಡುಗ ʼನೀರಜ್ ಚೋಪ್ರಾʼ

ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ನೀರಜ್ ತಮ್ಮದೇ ಕ್ರೀಡಾಪಟು ನಿರ್ವಹಣಾ ಸಂಸ್ಥೆ ‘ವೆಲ್ ಸ್ಪೋರ್ಟ್ಸ್’ ಅನ್ನು ಪ್ರಾರಂಭಿಸಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿದ್ದಾರೆ.

JSW ಸ್ಪೋರ್ಟ್ಸ್ ಜೊತೆಗಿನ ನೀರಜ್ ಅವರ ಸಂಪರ್ಕ 2016ರಲ್ಲಿ ಆರಂಭವಾಗಿದ್ದು, JSW ಸ್ಪೋರ್ಟ್ಸ್ ಎಕ್ಸಲೆನ್ಸ್ ಪ್ರೋಗ್ರಾಂ (SEP) ಮೂಲಕ ಅವರನ್ನು ಮೊಟ್ಟಮೊದಲಾಗಿ ಗುರುತಿಸಲಾಯಿತು.

ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯರಾಗಿರುವ ನೀರಜ್, 2023ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಹಾಗೂ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಜೊತೆಗೆ ಜಾಗತಿಕ ವೇದಿಕೆಯಲ್ಲಿ ಅನೇಕ ಪೋಡಿಯಂ ಸಾಧನೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ನೀರಜ್ ಇದೀಗ ‘ವೆಲ್ ಸ್ಪೋರ್ಟ್ಸ್’ ಮೂಲಕ ಉದ್ಯಮ ಲೋಕಕ್ಕೆ ಕಾಲಿಡುತ್ತಿದ್ದು, ಈ ಬೆಳವಣಿಗೆಯನ್ನು ರೂಪಿಸಲು JSW ಸ್ಪೋರ್ಟ್ಸ್ ಅವರೊಂದಿಗೆ ಕೈಜೋಡಿಸಿದೆ. ಈ ಕುರಿತು ಮಾತನಾಡಿದ JSW ಸ್ಪೋರ್ಟ್ಸ್‌ನ ಸಿಇಒ ದಿವ್ಯಾಂಶು ಸಿಂಗ್, “ನೀರಜ್ ಅವರೊಂದಿಗೆ ಕೆಲಸ ಮಾಡುವುದು JSW ಸ್ಪೋರ್ಟ್ಸ್‌ನ ಎಲ್ಲರಿಗೂ ಅದ್ಭುತ ಅನುಭವವಾಗಿತ್ತು. ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ನಾವು ಹಾರ್ದಿಕ ಶುಭಾಶಯಗಳನ್ನು ಕೋರುತ್ತೇವೆ,” ಎಂದು ಹೇಳಿದರು.

ನೀರಜ್ ಚೋಪ್ರಾ ಮಾತನಾಡಿ, “ನನ್ನ ವೃತ್ತಿಜೀವನದಲ್ಲಿ JSW ಸ್ಪೋರ್ಟ್ಸ್ ನಿರ್ಣಾಯಕ ಪಾತ್ರವಹಿಸಿದೆ. ಅವರ ಬೆಂಬಲ ಮತ್ತು ದೃಷ್ಟಿಕೋನಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ,” ಎಂದರು.

ನೀರಜ್ ಹೊಸ ಉದ್ಯಮಶೀಲ ಅಧ್ಯಾಯವನ್ನು ಆರಂಭಿಸುತ್ತಿರುವ ಈ ಸಂದರ್ಭದಲ್ಲಿ, ಎರಡೂ ಪಕ್ಷಗಳು ಪರಸ್ಪರ ಆಳವಾದ ಗೌರವ ಮತ್ತು ಹೆಮ್ಮೆಯೊಂದಿಗೆ ವಿದಾಯವಾಗುತ್ತಿವೆ. JSW ಸ್ಪೋರ್ಟ್ಸ್ ಭಾರತದ ಅತ್ಯಂತ ಭರವಸೆಯ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ತನ್ನ ಧ್ಯೇಯವನ್ನು ಮುಂದುವರಿಸುತ್ತಿದ್ದು, ಇದು ಭಾರತೀಯ ಕ್ರೀಡೆಯ ಭವಿಷ್ಯವನ್ನು ಪ್ರೇರೇಪಿಸುವ ಬಲವಾದ ಆಧಾರವಾಗಿರಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

7 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

11 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago