ಕ್ರೀಡೆ

ʻವೆಲ್ ಸ್ಪೋರ್ಟ್ಸ್ʼ ಮೂಲಕ ಹೊಸ ಅಧ್ಯಾಯ ಆರಂಭಿಸಿದ ಚಿನ್ನದ ಹುಡುಗ ʼನೀರಜ್ ಚೋಪ್ರಾʼ

ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ನೀರಜ್ ತಮ್ಮದೇ ಕ್ರೀಡಾಪಟು ನಿರ್ವಹಣಾ ಸಂಸ್ಥೆ ‘ವೆಲ್ ಸ್ಪೋರ್ಟ್ಸ್’ ಅನ್ನು ಪ್ರಾರಂಭಿಸಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿದ್ದಾರೆ.

JSW ಸ್ಪೋರ್ಟ್ಸ್ ಜೊತೆಗಿನ ನೀರಜ್ ಅವರ ಸಂಪರ್ಕ 2016ರಲ್ಲಿ ಆರಂಭವಾಗಿದ್ದು, JSW ಸ್ಪೋರ್ಟ್ಸ್ ಎಕ್ಸಲೆನ್ಸ್ ಪ್ರೋಗ್ರಾಂ (SEP) ಮೂಲಕ ಅವರನ್ನು ಮೊಟ್ಟಮೊದಲಾಗಿ ಗುರುತಿಸಲಾಯಿತು.

ಟೋಕಿಯೋ 2020 ಒಲಿಂಪಿಕ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯರಾಗಿರುವ ನೀರಜ್, 2023ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಹಾಗೂ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಜೊತೆಗೆ ಜಾಗತಿಕ ವೇದಿಕೆಯಲ್ಲಿ ಅನೇಕ ಪೋಡಿಯಂ ಸಾಧನೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ನೀರಜ್ ಇದೀಗ ‘ವೆಲ್ ಸ್ಪೋರ್ಟ್ಸ್’ ಮೂಲಕ ಉದ್ಯಮ ಲೋಕಕ್ಕೆ ಕಾಲಿಡುತ್ತಿದ್ದು, ಈ ಬೆಳವಣಿಗೆಯನ್ನು ರೂಪಿಸಲು JSW ಸ್ಪೋರ್ಟ್ಸ್ ಅವರೊಂದಿಗೆ ಕೈಜೋಡಿಸಿದೆ. ಈ ಕುರಿತು ಮಾತನಾಡಿದ JSW ಸ್ಪೋರ್ಟ್ಸ್‌ನ ಸಿಇಒ ದಿವ್ಯಾಂಶು ಸಿಂಗ್, “ನೀರಜ್ ಅವರೊಂದಿಗೆ ಕೆಲಸ ಮಾಡುವುದು JSW ಸ್ಪೋರ್ಟ್ಸ್‌ನ ಎಲ್ಲರಿಗೂ ಅದ್ಭುತ ಅನುಭವವಾಗಿತ್ತು. ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ನಾವು ಹಾರ್ದಿಕ ಶುಭಾಶಯಗಳನ್ನು ಕೋರುತ್ತೇವೆ,” ಎಂದು ಹೇಳಿದರು.

ನೀರಜ್ ಚೋಪ್ರಾ ಮಾತನಾಡಿ, “ನನ್ನ ವೃತ್ತಿಜೀವನದಲ್ಲಿ JSW ಸ್ಪೋರ್ಟ್ಸ್ ನಿರ್ಣಾಯಕ ಪಾತ್ರವಹಿಸಿದೆ. ಅವರ ಬೆಂಬಲ ಮತ್ತು ದೃಷ್ಟಿಕೋನಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ,” ಎಂದರು.

ನೀರಜ್ ಹೊಸ ಉದ್ಯಮಶೀಲ ಅಧ್ಯಾಯವನ್ನು ಆರಂಭಿಸುತ್ತಿರುವ ಈ ಸಂದರ್ಭದಲ್ಲಿ, ಎರಡೂ ಪಕ್ಷಗಳು ಪರಸ್ಪರ ಆಳವಾದ ಗೌರವ ಮತ್ತು ಹೆಮ್ಮೆಯೊಂದಿಗೆ ವಿದಾಯವಾಗುತ್ತಿವೆ. JSW ಸ್ಪೋರ್ಟ್ಸ್ ಭಾರತದ ಅತ್ಯಂತ ಭರವಸೆಯ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ತನ್ನ ಧ್ಯೇಯವನ್ನು ಮುಂದುವರಿಸುತ್ತಿದ್ದು, ಇದು ಭಾರತೀಯ ಕ್ರೀಡೆಯ ಭವಿಷ್ಯವನ್ನು ಪ್ರೇರೇಪಿಸುವ ಬಲವಾದ ಆಧಾರವಾಗಿರಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

43 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago