ಕ್ರೀಡೆ

ಗಾಲ್ಫ್‌: ಮ್ಯಾಜಿಕಲ್ ಕೀನ್ಯಾ ಓಪನ್‌ನಲ್ಲಿ ಬೆಂಗಳೂರಿನ ಅದಿತಿ ಅಶೋಕ್ ಕಿರೀಟ

ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್‌ ಪ್ರಶಸ್ತಿ ಗೆದ್ದುಕೊಂಡರು.  ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್‌ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್‌ ಅಂತರದಿಂದ ಗೆಲುವು ಸಾಧಿಸಿದರು.  ಮುಂದಿನ ತಿಂಗಳು 25 ವರ್ಷಕ್ಕೆ ಕಾಲಿಡಲಿರುವ ಅದಿತಿ, ನವೆಂಬರ್ 2017 ರಲ್ಲಿ ಅಬುಧಾಬಿಯಲ್ಲಿ ಕೊನೆಯ ಬಾರಿಗೆ ಜಯಗಳಿಸಿದ್ದರು. ಅಲ್ಲಿಂದ ಬಹುಕಾಲದವರೆಗೆ ಪ್ರಶಸ್ತಿ ಬರ ಅನುಭವಿಸಿದ್ದರು.ಹೀರೋ ವುಮೆನ್ಸ್ ಇಂಡಿಯನ್ ಓಪನ್‌ ಮತ್ತು ಕತಾರ್ ಲೇಡೀಸ್ ಓಪನ್‌ನಲ್ಲಿ ಕಿರೀಟ ಧರಿಸಿದ್ದಾರೆ.

ಎಲ್‌ಇಟಿಯಲ್ಲಿ ಅದಿತಿಯ ದಾಖಲೆಯು ತುಂಬಾ ಉತ್ತಮವಾಗಿದೆ. ಏಕೆಂದರೆ ಅವರು   ನಾಲ್ಕು ಬಾರಿ ಗೆದ್ದಿರುವುದಲ್ಲದೆ, 20 ಸಲ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೆಲುವಿನೊಂದಿಗೆ, ಮೊದಲ ಎಲ್‌ಪಿಜಿಎಯನ್ನು ಜಯಿಸುವ ಆತ್ಮವಿಶ್ವಾಸದಲ್ಲಿದ್ದಾರೆ. ಒಂದೊಮ್ಮೆ ಕನಸು ಕೈಗೂಡಿದರೆ ಈ ಸಾಧನೆ ಮಾಡಿದ ಭಾರತದ ಮೊದಲ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವರು.

2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅದಿತಿ ಅವರು ಕೂದಲೆಳೆಯ ಅಂತರದಲ್ಲಿ ಪದಕವನ್ನು ಕೈತಪ್ಪಿಸಿಕೊಂಡಿದ್ದರು. ಅಲ್ಲಿ ಅವರು ನಾಲ್ಕನೇ ಸ್ಥಾನ ಪಡೆದಿದ್ದರು.  ಅದಿತಿ ನಾಲ್ಕು ಸುತ್ತುಗಳಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಅವರು ಕ್ರಮವಾಗಿ 67, 70, 69 ಮತ್ತು 74 ಸ್ಟ್ರೋಕ್‌ಗಳಲ್ಲಿ ಸ್ಪರ್ಧೆ ಕೊನೆಗೊಳಿಸಿ ಒಟ್ಟು 280 ಸ್ಕೋರ್‌ ಮಾಡಿದರು.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

27 mins ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

1 hour ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

1 hour ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

1 hour ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

2 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

2 hours ago