ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್ ಅಂತರದಿಂದ ಗೆಲುವು ಸಾಧಿಸಿದರು. ಮುಂದಿನ ತಿಂಗಳು 25 ವರ್ಷಕ್ಕೆ ಕಾಲಿಡಲಿರುವ ಅದಿತಿ, ನವೆಂಬರ್ 2017 ರಲ್ಲಿ ಅಬುಧಾಬಿಯಲ್ಲಿ ಕೊನೆಯ ಬಾರಿಗೆ ಜಯಗಳಿಸಿದ್ದರು. ಅಲ್ಲಿಂದ ಬಹುಕಾಲದವರೆಗೆ ಪ್ರಶಸ್ತಿ ಬರ ಅನುಭವಿಸಿದ್ದರು.ಹೀರೋ ವುಮೆನ್ಸ್ ಇಂಡಿಯನ್ ಓಪನ್ ಮತ್ತು ಕತಾರ್ ಲೇಡೀಸ್ ಓಪನ್ನಲ್ಲಿ ಕಿರೀಟ ಧರಿಸಿದ್ದಾರೆ.
ಎಲ್ಇಟಿಯಲ್ಲಿ ಅದಿತಿಯ ದಾಖಲೆಯು ತುಂಬಾ ಉತ್ತಮವಾಗಿದೆ. ಏಕೆಂದರೆ ಅವರು ನಾಲ್ಕು ಬಾರಿ ಗೆದ್ದಿರುವುದಲ್ಲದೆ, 20 ಸಲ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೆಲುವಿನೊಂದಿಗೆ, ಮೊದಲ ಎಲ್ಪಿಜಿಎಯನ್ನು ಜಯಿಸುವ ಆತ್ಮವಿಶ್ವಾಸದಲ್ಲಿದ್ದಾರೆ. ಒಂದೊಮ್ಮೆ ಕನಸು ಕೈಗೂಡಿದರೆ ಈ ಸಾಧನೆ ಮಾಡಿದ ಭಾರತದ ಮೊದಲ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವರು.
2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಅದಿತಿ ಅವರು ಕೂದಲೆಳೆಯ ಅಂತರದಲ್ಲಿ ಪದಕವನ್ನು ಕೈತಪ್ಪಿಸಿಕೊಂಡಿದ್ದರು. ಅಲ್ಲಿ ಅವರು ನಾಲ್ಕನೇ ಸ್ಥಾನ ಪಡೆದಿದ್ದರು. ಅದಿತಿ ನಾಲ್ಕು ಸುತ್ತುಗಳಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಅವರು ಕ್ರಮವಾಗಿ 67, 70, 69 ಮತ್ತು 74 ಸ್ಟ್ರೋಕ್ಗಳಲ್ಲಿ ಸ್ಪರ್ಧೆ ಕೊನೆಗೊಳಿಸಿ ಒಟ್ಟು 280 ಸ್ಕೋರ್ ಮಾಡಿದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…