ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್ ಅಂತರದಿಂದ ಗೆಲುವು ಸಾಧಿಸಿದರು. ಮುಂದಿನ ತಿಂಗಳು 25 ವರ್ಷಕ್ಕೆ ಕಾಲಿಡಲಿರುವ ಅದಿತಿ, ನವೆಂಬರ್ 2017 ರಲ್ಲಿ ಅಬುಧಾಬಿಯಲ್ಲಿ ಕೊನೆಯ ಬಾರಿಗೆ ಜಯಗಳಿಸಿದ್ದರು. ಅಲ್ಲಿಂದ ಬಹುಕಾಲದವರೆಗೆ ಪ್ರಶಸ್ತಿ ಬರ ಅನುಭವಿಸಿದ್ದರು.ಹೀರೋ ವುಮೆನ್ಸ್ ಇಂಡಿಯನ್ ಓಪನ್ ಮತ್ತು ಕತಾರ್ ಲೇಡೀಸ್ ಓಪನ್ನಲ್ಲಿ ಕಿರೀಟ ಧರಿಸಿದ್ದಾರೆ.
ಎಲ್ಇಟಿಯಲ್ಲಿ ಅದಿತಿಯ ದಾಖಲೆಯು ತುಂಬಾ ಉತ್ತಮವಾಗಿದೆ. ಏಕೆಂದರೆ ಅವರು ನಾಲ್ಕು ಬಾರಿ ಗೆದ್ದಿರುವುದಲ್ಲದೆ, 20 ಸಲ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೆಲುವಿನೊಂದಿಗೆ, ಮೊದಲ ಎಲ್ಪಿಜಿಎಯನ್ನು ಜಯಿಸುವ ಆತ್ಮವಿಶ್ವಾಸದಲ್ಲಿದ್ದಾರೆ. ಒಂದೊಮ್ಮೆ ಕನಸು ಕೈಗೂಡಿದರೆ ಈ ಸಾಧನೆ ಮಾಡಿದ ಭಾರತದ ಮೊದಲ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವರು.
2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಅದಿತಿ ಅವರು ಕೂದಲೆಳೆಯ ಅಂತರದಲ್ಲಿ ಪದಕವನ್ನು ಕೈತಪ್ಪಿಸಿಕೊಂಡಿದ್ದರು. ಅಲ್ಲಿ ಅವರು ನಾಲ್ಕನೇ ಸ್ಥಾನ ಪಡೆದಿದ್ದರು. ಅದಿತಿ ನಾಲ್ಕು ಸುತ್ತುಗಳಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಅವರು ಕ್ರಮವಾಗಿ 67, 70, 69 ಮತ್ತು 74 ಸ್ಟ್ರೋಕ್ಗಳಲ್ಲಿ ಸ್ಪರ್ಧೆ ಕೊನೆಗೊಳಿಸಿ ಒಟ್ಟು 280 ಸ್ಕೋರ್ ಮಾಡಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…