ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್ ಅಂತರದಿಂದ ಗೆಲುವು ಸಾಧಿಸಿದರು. ಮುಂದಿನ ತಿಂಗಳು 25 ವರ್ಷಕ್ಕೆ ಕಾಲಿಡಲಿರುವ ಅದಿತಿ, ನವೆಂಬರ್ 2017 ರಲ್ಲಿ ಅಬುಧಾಬಿಯಲ್ಲಿ ಕೊನೆಯ ಬಾರಿಗೆ ಜಯಗಳಿಸಿದ್ದರು. ಅಲ್ಲಿಂದ ಬಹುಕಾಲದವರೆಗೆ ಪ್ರಶಸ್ತಿ ಬರ ಅನುಭವಿಸಿದ್ದರು.ಹೀರೋ ವುಮೆನ್ಸ್ ಇಂಡಿಯನ್ ಓಪನ್ ಮತ್ತು ಕತಾರ್ ಲೇಡೀಸ್ ಓಪನ್ನಲ್ಲಿ ಕಿರೀಟ ಧರಿಸಿದ್ದಾರೆ.
ಎಲ್ಇಟಿಯಲ್ಲಿ ಅದಿತಿಯ ದಾಖಲೆಯು ತುಂಬಾ ಉತ್ತಮವಾಗಿದೆ. ಏಕೆಂದರೆ ಅವರು ನಾಲ್ಕು ಬಾರಿ ಗೆದ್ದಿರುವುದಲ್ಲದೆ, 20 ಸಲ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೆಲುವಿನೊಂದಿಗೆ, ಮೊದಲ ಎಲ್ಪಿಜಿಎಯನ್ನು ಜಯಿಸುವ ಆತ್ಮವಿಶ್ವಾಸದಲ್ಲಿದ್ದಾರೆ. ಒಂದೊಮ್ಮೆ ಕನಸು ಕೈಗೂಡಿದರೆ ಈ ಸಾಧನೆ ಮಾಡಿದ ಭಾರತದ ಮೊದಲ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವರು.
2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಅದಿತಿ ಅವರು ಕೂದಲೆಳೆಯ ಅಂತರದಲ್ಲಿ ಪದಕವನ್ನು ಕೈತಪ್ಪಿಸಿಕೊಂಡಿದ್ದರು. ಅಲ್ಲಿ ಅವರು ನಾಲ್ಕನೇ ಸ್ಥಾನ ಪಡೆದಿದ್ದರು. ಅದಿತಿ ನಾಲ್ಕು ಸುತ್ತುಗಳಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಅವರು ಕ್ರಮವಾಗಿ 67, 70, 69 ಮತ್ತು 74 ಸ್ಟ್ರೋಕ್ಗಳಲ್ಲಿ ಸ್ಪರ್ಧೆ ಕೊನೆಗೊಳಿಸಿ ಒಟ್ಟು 280 ಸ್ಕೋರ್ ಮಾಡಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…