ಕ್ರೀಡೆ

ಗಾಲ್ಫ್‌: ಮ್ಯಾಜಿಕಲ್ ಕೀನ್ಯಾ ಓಪನ್‌ನಲ್ಲಿ ಬೆಂಗಳೂರಿನ ಅದಿತಿ ಅಶೋಕ್ ಕಿರೀಟ

ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್‌ ಪ್ರಶಸ್ತಿ ಗೆದ್ದುಕೊಂಡರು.  ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್‌ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್‌ ಅಂತರದಿಂದ ಗೆಲುವು ಸಾಧಿಸಿದರು.  ಮುಂದಿನ ತಿಂಗಳು 25 ವರ್ಷಕ್ಕೆ ಕಾಲಿಡಲಿರುವ ಅದಿತಿ, ನವೆಂಬರ್ 2017 ರಲ್ಲಿ ಅಬುಧಾಬಿಯಲ್ಲಿ ಕೊನೆಯ ಬಾರಿಗೆ ಜಯಗಳಿಸಿದ್ದರು. ಅಲ್ಲಿಂದ ಬಹುಕಾಲದವರೆಗೆ ಪ್ರಶಸ್ತಿ ಬರ ಅನುಭವಿಸಿದ್ದರು.ಹೀರೋ ವುಮೆನ್ಸ್ ಇಂಡಿಯನ್ ಓಪನ್‌ ಮತ್ತು ಕತಾರ್ ಲೇಡೀಸ್ ಓಪನ್‌ನಲ್ಲಿ ಕಿರೀಟ ಧರಿಸಿದ್ದಾರೆ.

ಎಲ್‌ಇಟಿಯಲ್ಲಿ ಅದಿತಿಯ ದಾಖಲೆಯು ತುಂಬಾ ಉತ್ತಮವಾಗಿದೆ. ಏಕೆಂದರೆ ಅವರು   ನಾಲ್ಕು ಬಾರಿ ಗೆದ್ದಿರುವುದಲ್ಲದೆ, 20 ಸಲ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೆಲುವಿನೊಂದಿಗೆ, ಮೊದಲ ಎಲ್‌ಪಿಜಿಎಯನ್ನು ಜಯಿಸುವ ಆತ್ಮವಿಶ್ವಾಸದಲ್ಲಿದ್ದಾರೆ. ಒಂದೊಮ್ಮೆ ಕನಸು ಕೈಗೂಡಿದರೆ ಈ ಸಾಧನೆ ಮಾಡಿದ ಭಾರತದ ಮೊದಲ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವರು.

2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅದಿತಿ ಅವರು ಕೂದಲೆಳೆಯ ಅಂತರದಲ್ಲಿ ಪದಕವನ್ನು ಕೈತಪ್ಪಿಸಿಕೊಂಡಿದ್ದರು. ಅಲ್ಲಿ ಅವರು ನಾಲ್ಕನೇ ಸ್ಥಾನ ಪಡೆದಿದ್ದರು.  ಅದಿತಿ ನಾಲ್ಕು ಸುತ್ತುಗಳಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಅವರು ಕ್ರಮವಾಗಿ 67, 70, 69 ಮತ್ತು 74 ಸ್ಟ್ರೋಕ್‌ಗಳಲ್ಲಿ ಸ್ಪರ್ಧೆ ಕೊನೆಗೊಳಿಸಿ ಒಟ್ಟು 280 ಸ್ಕೋರ್‌ ಮಾಡಿದರು.

andolanait

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

9 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

9 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

15 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

16 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

18 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

18 hours ago