ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಶುಭಾರಂಭ.. ಸಾತ್ವಿಕ್‌-ಚಿರಾಗ್‌ ಜೋಡಿಗೆ ಮೊದಲ ಗೆಲುವು

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್‌ನಲ್ಲಿಯೂ ಲಕ್ಷ್ಯಸೇನ್‌ ಮೊದಲ ಸುತ್ತಿನಲ್ಲಿ ಮುನ್ನಡೆದರು.

ಈ ಇಬ್ಬರ ಜೋಡಿಯ ಅಬ್ಬರದ ಆಟದ ಮುಂದೆ ಫ್ರಾನ್ಸ್‌ನ ಲುಕಾಸ್‌ ಕೋರ್ವಿ ಹಾಗೂ ರೋನನ್‌ ಲಾಬರ್‌ ಮಂಡಿಯೂರಿದ್ದಾರೆ. ಒಟ್ಟು 48 ನಿಮಿಷಗಳ ಕಾಲ ಸೆಣೆಸಾಡಿದ ಈ ಜೋಡಿ 21-17, 21-14 ಅಂತರದಲ್ಲಿ ಗೆಲುವು ಸಾಧಿಸಿದೆ.

ಮೊದಮೊದಲು ಫ್ರಾನ್ಸ್‌ ಜೋಡಿ ಭಾರತದ ಚಿರಾಗ್‌ ಹಾಗೂ ಸಾತ್ವಿಕ್‌ ವಿರುದ್ಧ ಹಿಡಿತ ಸಾಧಿಸಿದ್ದರೂ ನಂತರ ಪುಟಿದೆದ್ದ ಚಿರಾಗ್‌ ಹಾಗೂ ಸಾತ್ವಿಕ್‌ ಒಂದೇ ಒಂದು ಪಾಯಿಂಟ್ಸ್‌ ಬಿಡದ ಹಾಗೆ ಅವರನ್ನು ಎದುರಿಸಿದರು. ಭಾರತದ ಈ ಜೋಡಿ ಸೋಮವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜರ್ಮನಿಯ ಮಾರ್ಕ್‌ ಲ್ಯಾಮ್ಸ್‌ಫಸ್‌ ಮತ್ತು ಮಾರ್ವಿನ್‌ ಸೀಡೆಲ್‌ ಅವರನ್ನು ಎದುರಿಸಲಿದ್ದಾರೆ.

ಸೇನ್‌ಗೆ ಮೊದಲು ಗೆಲುವು: 22ರ ಹರೆಯದ ಲಕ್ಷ್ಯಸೇನ್‌ಗೆ ಇದು ಮೊದಲ ಒಲಿಂಪಿಕ್ಸ್‌. ಸಿಂಗಲ್ಸ್‌ ವಿಭಾಗದ ಎ ಗುಂಪಿನ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್‌ ಕಾರ್ಡ್‌ನ್‌ ಅವರನ್ನು ನೇರ ಆಟಗಳಲ್ಲಿ ಸೋಲುಣಿಸಿದರು.

ಸೇನ್‌ ಅವರು 42 ನಿಮಿಷಗಳ ಪಂದ್ಯದಲ್ಲಿ 21-8, 22-20 ರ ಅಂತರದಲಿ ಕಾರ್ಡನ್‌ ವಿರುದ್ಧ ಗೆದ್ದು ಬೀಗಿದರು. ಸೋಮವಾರ ನಡೆಯಲಿರುವ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್‌ ಕರಾಗ್ಗಿ ಅವರನ್ನು ಸೇನ್‌ ಎದುರಿಸಲಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

44 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

1 hour ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

1 hour ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

2 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

2 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

2 hours ago