ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಶುಭಾರಂಭ.. ಸಾತ್ವಿಕ್‌-ಚಿರಾಗ್‌ ಜೋಡಿಗೆ ಮೊದಲ ಗೆಲುವು

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್‌ನಲ್ಲಿಯೂ ಲಕ್ಷ್ಯಸೇನ್‌ ಮೊದಲ ಸುತ್ತಿನಲ್ಲಿ ಮುನ್ನಡೆದರು.

ಈ ಇಬ್ಬರ ಜೋಡಿಯ ಅಬ್ಬರದ ಆಟದ ಮುಂದೆ ಫ್ರಾನ್ಸ್‌ನ ಲುಕಾಸ್‌ ಕೋರ್ವಿ ಹಾಗೂ ರೋನನ್‌ ಲಾಬರ್‌ ಮಂಡಿಯೂರಿದ್ದಾರೆ. ಒಟ್ಟು 48 ನಿಮಿಷಗಳ ಕಾಲ ಸೆಣೆಸಾಡಿದ ಈ ಜೋಡಿ 21-17, 21-14 ಅಂತರದಲ್ಲಿ ಗೆಲುವು ಸಾಧಿಸಿದೆ.

ಮೊದಮೊದಲು ಫ್ರಾನ್ಸ್‌ ಜೋಡಿ ಭಾರತದ ಚಿರಾಗ್‌ ಹಾಗೂ ಸಾತ್ವಿಕ್‌ ವಿರುದ್ಧ ಹಿಡಿತ ಸಾಧಿಸಿದ್ದರೂ ನಂತರ ಪುಟಿದೆದ್ದ ಚಿರಾಗ್‌ ಹಾಗೂ ಸಾತ್ವಿಕ್‌ ಒಂದೇ ಒಂದು ಪಾಯಿಂಟ್ಸ್‌ ಬಿಡದ ಹಾಗೆ ಅವರನ್ನು ಎದುರಿಸಿದರು. ಭಾರತದ ಈ ಜೋಡಿ ಸೋಮವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜರ್ಮನಿಯ ಮಾರ್ಕ್‌ ಲ್ಯಾಮ್ಸ್‌ಫಸ್‌ ಮತ್ತು ಮಾರ್ವಿನ್‌ ಸೀಡೆಲ್‌ ಅವರನ್ನು ಎದುರಿಸಲಿದ್ದಾರೆ.

ಸೇನ್‌ಗೆ ಮೊದಲು ಗೆಲುವು: 22ರ ಹರೆಯದ ಲಕ್ಷ್ಯಸೇನ್‌ಗೆ ಇದು ಮೊದಲ ಒಲಿಂಪಿಕ್ಸ್‌. ಸಿಂಗಲ್ಸ್‌ ವಿಭಾಗದ ಎ ಗುಂಪಿನ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್‌ ಕಾರ್ಡ್‌ನ್‌ ಅವರನ್ನು ನೇರ ಆಟಗಳಲ್ಲಿ ಸೋಲುಣಿಸಿದರು.

ಸೇನ್‌ ಅವರು 42 ನಿಮಿಷಗಳ ಪಂದ್ಯದಲ್ಲಿ 21-8, 22-20 ರ ಅಂತರದಲಿ ಕಾರ್ಡನ್‌ ವಿರುದ್ಧ ಗೆದ್ದು ಬೀಗಿದರು. ಸೋಮವಾರ ನಡೆಯಲಿರುವ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್‌ ಕರಾಗ್ಗಿ ಅವರನ್ನು ಸೇನ್‌ ಎದುರಿಸಲಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago