ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಶುಭಾರಂಭ.. ಸಾತ್ವಿಕ್‌-ಚಿರಾಗ್‌ ಜೋಡಿಗೆ ಮೊದಲ ಗೆಲುವು

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್‌ನಲ್ಲಿಯೂ ಲಕ್ಷ್ಯಸೇನ್‌ ಮೊದಲ ಸುತ್ತಿನಲ್ಲಿ ಮುನ್ನಡೆದರು.

ಈ ಇಬ್ಬರ ಜೋಡಿಯ ಅಬ್ಬರದ ಆಟದ ಮುಂದೆ ಫ್ರಾನ್ಸ್‌ನ ಲುಕಾಸ್‌ ಕೋರ್ವಿ ಹಾಗೂ ರೋನನ್‌ ಲಾಬರ್‌ ಮಂಡಿಯೂರಿದ್ದಾರೆ. ಒಟ್ಟು 48 ನಿಮಿಷಗಳ ಕಾಲ ಸೆಣೆಸಾಡಿದ ಈ ಜೋಡಿ 21-17, 21-14 ಅಂತರದಲ್ಲಿ ಗೆಲುವು ಸಾಧಿಸಿದೆ.

ಮೊದಮೊದಲು ಫ್ರಾನ್ಸ್‌ ಜೋಡಿ ಭಾರತದ ಚಿರಾಗ್‌ ಹಾಗೂ ಸಾತ್ವಿಕ್‌ ವಿರುದ್ಧ ಹಿಡಿತ ಸಾಧಿಸಿದ್ದರೂ ನಂತರ ಪುಟಿದೆದ್ದ ಚಿರಾಗ್‌ ಹಾಗೂ ಸಾತ್ವಿಕ್‌ ಒಂದೇ ಒಂದು ಪಾಯಿಂಟ್ಸ್‌ ಬಿಡದ ಹಾಗೆ ಅವರನ್ನು ಎದುರಿಸಿದರು. ಭಾರತದ ಈ ಜೋಡಿ ಸೋಮವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜರ್ಮನಿಯ ಮಾರ್ಕ್‌ ಲ್ಯಾಮ್ಸ್‌ಫಸ್‌ ಮತ್ತು ಮಾರ್ವಿನ್‌ ಸೀಡೆಲ್‌ ಅವರನ್ನು ಎದುರಿಸಲಿದ್ದಾರೆ.

ಸೇನ್‌ಗೆ ಮೊದಲು ಗೆಲುವು: 22ರ ಹರೆಯದ ಲಕ್ಷ್ಯಸೇನ್‌ಗೆ ಇದು ಮೊದಲ ಒಲಿಂಪಿಕ್ಸ್‌. ಸಿಂಗಲ್ಸ್‌ ವಿಭಾಗದ ಎ ಗುಂಪಿನ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್‌ ಕಾರ್ಡ್‌ನ್‌ ಅವರನ್ನು ನೇರ ಆಟಗಳಲ್ಲಿ ಸೋಲುಣಿಸಿದರು.

ಸೇನ್‌ ಅವರು 42 ನಿಮಿಷಗಳ ಪಂದ್ಯದಲ್ಲಿ 21-8, 22-20 ರ ಅಂತರದಲಿ ಕಾರ್ಡನ್‌ ವಿರುದ್ಧ ಗೆದ್ದು ಬೀಗಿದರು. ಸೋಮವಾರ ನಡೆಯಲಿರುವ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್‌ ಕರಾಗ್ಗಿ ಅವರನ್ನು ಸೇನ್‌ ಎದುರಿಸಲಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

12 mins ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

2 hours ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

2 hours ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

3 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

4 hours ago