ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್ನಲ್ಲಿಯೂ ಲಕ್ಷ್ಯಸೇನ್ ಮೊದಲ ಸುತ್ತಿನಲ್ಲಿ ಮುನ್ನಡೆದರು.
ಈ ಇಬ್ಬರ ಜೋಡಿಯ ಅಬ್ಬರದ ಆಟದ ಮುಂದೆ ಫ್ರಾನ್ಸ್ನ ಲುಕಾಸ್ ಕೋರ್ವಿ ಹಾಗೂ ರೋನನ್ ಲಾಬರ್ ಮಂಡಿಯೂರಿದ್ದಾರೆ. ಒಟ್ಟು 48 ನಿಮಿಷಗಳ ಕಾಲ ಸೆಣೆಸಾಡಿದ ಈ ಜೋಡಿ 21-17, 21-14 ಅಂತರದಲ್ಲಿ ಗೆಲುವು ಸಾಧಿಸಿದೆ.
ಮೊದಮೊದಲು ಫ್ರಾನ್ಸ್ ಜೋಡಿ ಭಾರತದ ಚಿರಾಗ್ ಹಾಗೂ ಸಾತ್ವಿಕ್ ವಿರುದ್ಧ ಹಿಡಿತ ಸಾಧಿಸಿದ್ದರೂ ನಂತರ ಪುಟಿದೆದ್ದ ಚಿರಾಗ್ ಹಾಗೂ ಸಾತ್ವಿಕ್ ಒಂದೇ ಒಂದು ಪಾಯಿಂಟ್ಸ್ ಬಿಡದ ಹಾಗೆ ಅವರನ್ನು ಎದುರಿಸಿದರು. ಭಾರತದ ಈ ಜೋಡಿ ಸೋಮವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ ಮತ್ತು ಮಾರ್ವಿನ್ ಸೀಡೆಲ್ ಅವರನ್ನು ಎದುರಿಸಲಿದ್ದಾರೆ.
ಸೇನ್ಗೆ ಮೊದಲು ಗೆಲುವು: 22ರ ಹರೆಯದ ಲಕ್ಷ್ಯಸೇನ್ಗೆ ಇದು ಮೊದಲ ಒಲಿಂಪಿಕ್ಸ್. ಸಿಂಗಲ್ಸ್ ವಿಭಾಗದ ಎ ಗುಂಪಿನ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್ ಕಾರ್ಡ್ನ್ ಅವರನ್ನು ನೇರ ಆಟಗಳಲ್ಲಿ ಸೋಲುಣಿಸಿದರು.
ಸೇನ್ ಅವರು 42 ನಿಮಿಷಗಳ ಪಂದ್ಯದಲ್ಲಿ 21-8, 22-20 ರ ಅಂತರದಲಿ ಕಾರ್ಡನ್ ವಿರುದ್ಧ ಗೆದ್ದು ಬೀಗಿದರು. ಸೋಮವಾರ ನಡೆಯಲಿರುವ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್ ಕರಾಗ್ಗಿ ಅವರನ್ನು ಸೇನ್ ಎದುರಿಸಲಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…