ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಶುಭಾರಂಭ.. ಸಾತ್ವಿಕ್‌-ಚಿರಾಗ್‌ ಜೋಡಿಗೆ ಮೊದಲ ಗೆಲುವು

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್‌ನಲ್ಲಿಯೂ ಲಕ್ಷ್ಯಸೇನ್‌ ಮೊದಲ ಸುತ್ತಿನಲ್ಲಿ ಮುನ್ನಡೆದರು.

ಈ ಇಬ್ಬರ ಜೋಡಿಯ ಅಬ್ಬರದ ಆಟದ ಮುಂದೆ ಫ್ರಾನ್ಸ್‌ನ ಲುಕಾಸ್‌ ಕೋರ್ವಿ ಹಾಗೂ ರೋನನ್‌ ಲಾಬರ್‌ ಮಂಡಿಯೂರಿದ್ದಾರೆ. ಒಟ್ಟು 48 ನಿಮಿಷಗಳ ಕಾಲ ಸೆಣೆಸಾಡಿದ ಈ ಜೋಡಿ 21-17, 21-14 ಅಂತರದಲ್ಲಿ ಗೆಲುವು ಸಾಧಿಸಿದೆ.

ಮೊದಮೊದಲು ಫ್ರಾನ್ಸ್‌ ಜೋಡಿ ಭಾರತದ ಚಿರಾಗ್‌ ಹಾಗೂ ಸಾತ್ವಿಕ್‌ ವಿರುದ್ಧ ಹಿಡಿತ ಸಾಧಿಸಿದ್ದರೂ ನಂತರ ಪುಟಿದೆದ್ದ ಚಿರಾಗ್‌ ಹಾಗೂ ಸಾತ್ವಿಕ್‌ ಒಂದೇ ಒಂದು ಪಾಯಿಂಟ್ಸ್‌ ಬಿಡದ ಹಾಗೆ ಅವರನ್ನು ಎದುರಿಸಿದರು. ಭಾರತದ ಈ ಜೋಡಿ ಸೋಮವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜರ್ಮನಿಯ ಮಾರ್ಕ್‌ ಲ್ಯಾಮ್ಸ್‌ಫಸ್‌ ಮತ್ತು ಮಾರ್ವಿನ್‌ ಸೀಡೆಲ್‌ ಅವರನ್ನು ಎದುರಿಸಲಿದ್ದಾರೆ.

ಸೇನ್‌ಗೆ ಮೊದಲು ಗೆಲುವು: 22ರ ಹರೆಯದ ಲಕ್ಷ್ಯಸೇನ್‌ಗೆ ಇದು ಮೊದಲ ಒಲಿಂಪಿಕ್ಸ್‌. ಸಿಂಗಲ್ಸ್‌ ವಿಭಾಗದ ಎ ಗುಂಪಿನ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್‌ ಕಾರ್ಡ್‌ನ್‌ ಅವರನ್ನು ನೇರ ಆಟಗಳಲ್ಲಿ ಸೋಲುಣಿಸಿದರು.

ಸೇನ್‌ ಅವರು 42 ನಿಮಿಷಗಳ ಪಂದ್ಯದಲ್ಲಿ 21-8, 22-20 ರ ಅಂತರದಲಿ ಕಾರ್ಡನ್‌ ವಿರುದ್ಧ ಗೆದ್ದು ಬೀಗಿದರು. ಸೋಮವಾರ ನಡೆಯಲಿರುವ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್‌ ಕರಾಗ್ಗಿ ಅವರನ್ನು ಸೇನ್‌ ಎದುರಿಸಲಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

5 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

18 mins ago

ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾದಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

26 mins ago

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…

2 hours ago

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

2 hours ago

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

2 hours ago