ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್ನಲ್ಲಿಯೂ ಲಕ್ಷ್ಯಸೇನ್ ಮೊದಲ ಸುತ್ತಿನಲ್ಲಿ ಮುನ್ನಡೆದರು.
ಈ ಇಬ್ಬರ ಜೋಡಿಯ ಅಬ್ಬರದ ಆಟದ ಮುಂದೆ ಫ್ರಾನ್ಸ್ನ ಲುಕಾಸ್ ಕೋರ್ವಿ ಹಾಗೂ ರೋನನ್ ಲಾಬರ್ ಮಂಡಿಯೂರಿದ್ದಾರೆ. ಒಟ್ಟು 48 ನಿಮಿಷಗಳ ಕಾಲ ಸೆಣೆಸಾಡಿದ ಈ ಜೋಡಿ 21-17, 21-14 ಅಂತರದಲ್ಲಿ ಗೆಲುವು ಸಾಧಿಸಿದೆ.
ಮೊದಮೊದಲು ಫ್ರಾನ್ಸ್ ಜೋಡಿ ಭಾರತದ ಚಿರಾಗ್ ಹಾಗೂ ಸಾತ್ವಿಕ್ ವಿರುದ್ಧ ಹಿಡಿತ ಸಾಧಿಸಿದ್ದರೂ ನಂತರ ಪುಟಿದೆದ್ದ ಚಿರಾಗ್ ಹಾಗೂ ಸಾತ್ವಿಕ್ ಒಂದೇ ಒಂದು ಪಾಯಿಂಟ್ಸ್ ಬಿಡದ ಹಾಗೆ ಅವರನ್ನು ಎದುರಿಸಿದರು. ಭಾರತದ ಈ ಜೋಡಿ ಸೋಮವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ ಮತ್ತು ಮಾರ್ವಿನ್ ಸೀಡೆಲ್ ಅವರನ್ನು ಎದುರಿಸಲಿದ್ದಾರೆ.
ಸೇನ್ಗೆ ಮೊದಲು ಗೆಲುವು: 22ರ ಹರೆಯದ ಲಕ್ಷ್ಯಸೇನ್ಗೆ ಇದು ಮೊದಲ ಒಲಿಂಪಿಕ್ಸ್. ಸಿಂಗಲ್ಸ್ ವಿಭಾಗದ ಎ ಗುಂಪಿನ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್ ಕಾರ್ಡ್ನ್ ಅವರನ್ನು ನೇರ ಆಟಗಳಲ್ಲಿ ಸೋಲುಣಿಸಿದರು.
ಸೇನ್ ಅವರು 42 ನಿಮಿಷಗಳ ಪಂದ್ಯದಲ್ಲಿ 21-8, 22-20 ರ ಅಂತರದಲಿ ಕಾರ್ಡನ್ ವಿರುದ್ಧ ಗೆದ್ದು ಬೀಗಿದರು. ಸೋಮವಾರ ನಡೆಯಲಿರುವ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್ ಕರಾಗ್ಗಿ ಅವರನ್ನು ಸೇನ್ ಎದುರಿಸಲಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…