ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಶುಭಾರಂಭ.. ಸಾತ್ವಿಕ್‌-ಚಿರಾಗ್‌ ಜೋಡಿಗೆ ಮೊದಲ ಗೆಲುವು

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್‌ನಲ್ಲಿಯೂ ಲಕ್ಷ್ಯಸೇನ್‌ ಮೊದಲ ಸುತ್ತಿನಲ್ಲಿ ಮುನ್ನಡೆದರು.

ಈ ಇಬ್ಬರ ಜೋಡಿಯ ಅಬ್ಬರದ ಆಟದ ಮುಂದೆ ಫ್ರಾನ್ಸ್‌ನ ಲುಕಾಸ್‌ ಕೋರ್ವಿ ಹಾಗೂ ರೋನನ್‌ ಲಾಬರ್‌ ಮಂಡಿಯೂರಿದ್ದಾರೆ. ಒಟ್ಟು 48 ನಿಮಿಷಗಳ ಕಾಲ ಸೆಣೆಸಾಡಿದ ಈ ಜೋಡಿ 21-17, 21-14 ಅಂತರದಲ್ಲಿ ಗೆಲುವು ಸಾಧಿಸಿದೆ.

ಮೊದಮೊದಲು ಫ್ರಾನ್ಸ್‌ ಜೋಡಿ ಭಾರತದ ಚಿರಾಗ್‌ ಹಾಗೂ ಸಾತ್ವಿಕ್‌ ವಿರುದ್ಧ ಹಿಡಿತ ಸಾಧಿಸಿದ್ದರೂ ನಂತರ ಪುಟಿದೆದ್ದ ಚಿರಾಗ್‌ ಹಾಗೂ ಸಾತ್ವಿಕ್‌ ಒಂದೇ ಒಂದು ಪಾಯಿಂಟ್ಸ್‌ ಬಿಡದ ಹಾಗೆ ಅವರನ್ನು ಎದುರಿಸಿದರು. ಭಾರತದ ಈ ಜೋಡಿ ಸೋಮವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜರ್ಮನಿಯ ಮಾರ್ಕ್‌ ಲ್ಯಾಮ್ಸ್‌ಫಸ್‌ ಮತ್ತು ಮಾರ್ವಿನ್‌ ಸೀಡೆಲ್‌ ಅವರನ್ನು ಎದುರಿಸಲಿದ್ದಾರೆ.

ಸೇನ್‌ಗೆ ಮೊದಲು ಗೆಲುವು: 22ರ ಹರೆಯದ ಲಕ್ಷ್ಯಸೇನ್‌ಗೆ ಇದು ಮೊದಲ ಒಲಿಂಪಿಕ್ಸ್‌. ಸಿಂಗಲ್ಸ್‌ ವಿಭಾಗದ ಎ ಗುಂಪಿನ ಪಂದ್ಯದಲ್ಲಿ ಗ್ವಾಟೆಮಾಲಾದ ಕೆವಿನ್‌ ಕಾರ್ಡ್‌ನ್‌ ಅವರನ್ನು ನೇರ ಆಟಗಳಲ್ಲಿ ಸೋಲುಣಿಸಿದರು.

ಸೇನ್‌ ಅವರು 42 ನಿಮಿಷಗಳ ಪಂದ್ಯದಲ್ಲಿ 21-8, 22-20 ರ ಅಂತರದಲಿ ಕಾರ್ಡನ್‌ ವಿರುದ್ಧ ಗೆದ್ದು ಬೀಗಿದರು. ಸೋಮವಾರ ನಡೆಯಲಿರುವ ಗುಂಪಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್‌ ಕರಾಗ್ಗಿ ಅವರನ್ನು ಸೇನ್‌ ಎದುರಿಸಲಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago