ಕ್ರೀಡೆ

IPL 2024: KKR vs SRH ನಡುವಿನ ಫೈನಲ್‌ ಪಂದ್ಯಕ್ಕೆ ವಿಶೇಷ ಡೂಡಲ್‌ ಹಂಚಿಕೊಂಡ ಗೂಗಲ್‌

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರಿಡಾಂಗಣದಲ್ಲಿ ಇಂದು ನಡೆಯಲಿರುವ 17ನೇ ಐಪಿಎಲ್‌ ಸೀಸನ್‌ನ ಫೈನಲ್‌ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದ ತಂಡಗಳು ಮೂರನೇ ಬಾರಿ ಐಪಿಎಲ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ.

ಇನ್ನು ಈ ಫೈನಲ್‌ ಪಂದ್ಯಕ್ಕೆ ಗೂಗಲ್‌ ತನ್ನ ಡೂಡಲ್‌ ಮೂಲಕ ವಿಶೇಷ ಶುಭಾಷಯ ಕೋರಿರುವ ಡೂಡಲ್‌ನನ್ನು ಹಂಚಿಕೊಂಡಿದೆ. ಇದರಲ್ಲಿ ಬ್ಯಾಟ್‌ ಬಾಲ್‌ ಮತ್ತು ಸ್ಟಂಪ್ಸ್‌ಗಳನ್ನು ನಾವು ಕಾಣಬಹುದಾಗಿದೆ. ಜತೆಗೆ ಡೂಡಲ್‌ನ ಎರಡು ಬದಿಗಳಲ್ಲಿ ಎಸ್‌ಆರ್‌ಎಚ್‌ ಮತ್ತು ಕೆಕೆಆರ್‌ ತಂಡದ ಅಭಿಮಾನಿಗಳು ಹುರಿದುಂಬಿಸುತ್ತಿರುವುದನ್ನು ಕಾರ್ಟೂನ್‌ ಮೂಲಕ ಗೂಗಲ್‌ ತನ್ನ ಮುಖಪುಟಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದಾಗಿದೆ.

ಇನ್ನು ಇಂದು ನಡೆಯುವ ಫೈನಲ್‌ ಫೈಟ್‌ಗೆ ಮುನ್ನಾ ಕೆಕೆಆರ್‌ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ಎಸ್‌ಆರ್‌ಎಚ್‌ ನಾಯಕ ಪ್ಯಾಟ್‌ ಕಮಿನ್ಸ್‌ ಅವರು ಭರ್ಜರಿ ಫೋಟೋಶೂಟ್‌ ನಡೆಸಿದ್ದಾರೆ.

ಈ ಬಗ್ಗೆ iplt20 ಇನ್ಸ್ಟಾಗ್ರಾಂ ಖಾತೆಯಲ್ಲಿ ಹಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅದಕ್ಕೆ ಟೂ ಕ್ಯಾಪ್ಟನ್‌ ಒನ್‌ ಟ್ರೋಫಿ, ಎಲ್ಲರ ದೃಷ್ಠ ಫೈನಲ್‌ ಪಂದ್ಯದ ಮೇಲೆ ಎಂದು ಬರೆದುಕೊಂಡಿದ್ದಾರೆ.

https://www.instagram.com/p/C7Y824kt_n3/?igsh=Y2tjaXY3d3E2Mnhz&img_index=1

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

12 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

13 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

15 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

15 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

18 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

19 hours ago