ಕ್ರೀಡೆ

IPL 2024: KKR vs SRH ನಡುವಿನ ಫೈನಲ್‌ ಪಂದ್ಯಕ್ಕೆ ವಿಶೇಷ ಡೂಡಲ್‌ ಹಂಚಿಕೊಂಡ ಗೂಗಲ್‌

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರಿಡಾಂಗಣದಲ್ಲಿ ಇಂದು ನಡೆಯಲಿರುವ 17ನೇ ಐಪಿಎಲ್‌ ಸೀಸನ್‌ನ ಫೈನಲ್‌ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದ ತಂಡಗಳು ಮೂರನೇ ಬಾರಿ ಐಪಿಎಲ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ.

ಇನ್ನು ಈ ಫೈನಲ್‌ ಪಂದ್ಯಕ್ಕೆ ಗೂಗಲ್‌ ತನ್ನ ಡೂಡಲ್‌ ಮೂಲಕ ವಿಶೇಷ ಶುಭಾಷಯ ಕೋರಿರುವ ಡೂಡಲ್‌ನನ್ನು ಹಂಚಿಕೊಂಡಿದೆ. ಇದರಲ್ಲಿ ಬ್ಯಾಟ್‌ ಬಾಲ್‌ ಮತ್ತು ಸ್ಟಂಪ್ಸ್‌ಗಳನ್ನು ನಾವು ಕಾಣಬಹುದಾಗಿದೆ. ಜತೆಗೆ ಡೂಡಲ್‌ನ ಎರಡು ಬದಿಗಳಲ್ಲಿ ಎಸ್‌ಆರ್‌ಎಚ್‌ ಮತ್ತು ಕೆಕೆಆರ್‌ ತಂಡದ ಅಭಿಮಾನಿಗಳು ಹುರಿದುಂಬಿಸುತ್ತಿರುವುದನ್ನು ಕಾರ್ಟೂನ್‌ ಮೂಲಕ ಗೂಗಲ್‌ ತನ್ನ ಮುಖಪುಟಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದಾಗಿದೆ.

ಇನ್ನು ಇಂದು ನಡೆಯುವ ಫೈನಲ್‌ ಫೈಟ್‌ಗೆ ಮುನ್ನಾ ಕೆಕೆಆರ್‌ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ಎಸ್‌ಆರ್‌ಎಚ್‌ ನಾಯಕ ಪ್ಯಾಟ್‌ ಕಮಿನ್ಸ್‌ ಅವರು ಭರ್ಜರಿ ಫೋಟೋಶೂಟ್‌ ನಡೆಸಿದ್ದಾರೆ.

ಈ ಬಗ್ಗೆ iplt20 ಇನ್ಸ್ಟಾಗ್ರಾಂ ಖಾತೆಯಲ್ಲಿ ಹಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅದಕ್ಕೆ ಟೂ ಕ್ಯಾಪ್ಟನ್‌ ಒನ್‌ ಟ್ರೋಫಿ, ಎಲ್ಲರ ದೃಷ್ಠ ಫೈನಲ್‌ ಪಂದ್ಯದ ಮೇಲೆ ಎಂದು ಬರೆದುಕೊಂಡಿದ್ದಾರೆ.

https://www.instagram.com/p/C7Y824kt_n3/?igsh=Y2tjaXY3d3E2Mnhz&img_index=1

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

3 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

11 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

11 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

16 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

16 hours ago