ಕ್ರೀಡೆ

ಗ್ರೀನ್ ಭರ್ಜರಿ ಶತಕ: ಹೈದರಾಬಾದ್ ವಿರುದ್ಧ ಮುಂಬೈ ಜಯಭೇರಿ

ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.

ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್​ ಮೊತ್ತದ ಟಾರ್ಗೆಟ್​ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 201 ರನ್​ ಗಳಿಸುವ ಮೂಲಕ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್​ ಹಂತಕ್ಕೆ ತಲುಪಿದರೂ ಸಹ ಆರ್​ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್​ ಭವಿಷ್ಯ ನಿಂತಿದೆ.

ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.

ಹೈದರಾಬಾದ್‌ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್‌ ಮತ್ತು 8 ಸಿಕ್ಸ್‌ ಅವರ ಇನ್ನಿಂಗ್ಸ್‌ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.

ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.

 

andolanait

Recent Posts

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

29 mins ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

39 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

52 mins ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

1 hour ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

1 hour ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

2 hours ago