ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.
ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್ಗೆ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಭರ್ಜರಿ 8 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೆ ತಲುಪಿದರೂ ಸಹ ಆರ್ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್ ಭವಿಷ್ಯ ನಿಂತಿದೆ.
ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.
ಹೈದರಾಬಾದ್ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್ ಮತ್ತು 8 ಸಿಕ್ಸ್ ಅವರ ಇನ್ನಿಂಗ್ಸ್ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.
ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…