ಕ್ರೀಡೆ

ಗ್ರೀನ್ ಭರ್ಜರಿ ಶತಕ: ಹೈದರಾಬಾದ್ ವಿರುದ್ಧ ಮುಂಬೈ ಜಯಭೇರಿ

ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.

ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್​ ಮೊತ್ತದ ಟಾರ್ಗೆಟ್​ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 201 ರನ್​ ಗಳಿಸುವ ಮೂಲಕ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್​ ಹಂತಕ್ಕೆ ತಲುಪಿದರೂ ಸಹ ಆರ್​ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್​ ಭವಿಷ್ಯ ನಿಂತಿದೆ.

ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.

ಹೈದರಾಬಾದ್‌ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್‌ ಮತ್ತು 8 ಸಿಕ್ಸ್‌ ಅವರ ಇನ್ನಿಂಗ್ಸ್‌ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.

ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.

 

andolanait

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

12 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

40 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

51 mins ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

1 hour ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

2 hours ago