ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.
ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್ಗೆ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಭರ್ಜರಿ 8 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೆ ತಲುಪಿದರೂ ಸಹ ಆರ್ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್ ಭವಿಷ್ಯ ನಿಂತಿದೆ.
ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.
ಹೈದರಾಬಾದ್ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್ ಮತ್ತು 8 ಸಿಕ್ಸ್ ಅವರ ಇನ್ನಿಂಗ್ಸ್ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.
ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…