ಕ್ರೀಡೆ

ಗ್ರೀನ್ ಭರ್ಜರಿ ಶತಕ: ಹೈದರಾಬಾದ್ ವಿರುದ್ಧ ಮುಂಬೈ ಜಯಭೇರಿ

ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.

ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್​ ಮೊತ್ತದ ಟಾರ್ಗೆಟ್​ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 201 ರನ್​ ಗಳಿಸುವ ಮೂಲಕ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್​ ಹಂತಕ್ಕೆ ತಲುಪಿದರೂ ಸಹ ಆರ್​ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್​ ಭವಿಷ್ಯ ನಿಂತಿದೆ.

ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.

ಹೈದರಾಬಾದ್‌ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್‌ ಮತ್ತು 8 ಸಿಕ್ಸ್‌ ಅವರ ಇನ್ನಿಂಗ್ಸ್‌ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.

ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.

 

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

16 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago