ಕ್ರೀಡೆ

ಗ್ರೀನ್ ಭರ್ಜರಿ ಶತಕ: ಹೈದರಾಬಾದ್ ವಿರುದ್ಧ ಮುಂಬೈ ಜಯಭೇರಿ

ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.

ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್​ ಮೊತ್ತದ ಟಾರ್ಗೆಟ್​ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 201 ರನ್​ ಗಳಿಸುವ ಮೂಲಕ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್​ ಹಂತಕ್ಕೆ ತಲುಪಿದರೂ ಸಹ ಆರ್​ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್​ ಭವಿಷ್ಯ ನಿಂತಿದೆ.

ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.

ಹೈದರಾಬಾದ್‌ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್‌ ಮತ್ತು 8 ಸಿಕ್ಸ್‌ ಅವರ ಇನ್ನಿಂಗ್ಸ್‌ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.

ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.

 

andolanait

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

4 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

4 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

8 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

8 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

8 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

8 hours ago