ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.
ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್ಗೆ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಭರ್ಜರಿ 8 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೆ ತಲುಪಿದರೂ ಸಹ ಆರ್ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್ ಭವಿಷ್ಯ ನಿಂತಿದೆ.
ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.
ಹೈದರಾಬಾದ್ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್ ಮತ್ತು 8 ಸಿಕ್ಸ್ ಅವರ ಇನ್ನಿಂಗ್ಸ್ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.
ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…