ಕ್ರೀಡೆ

ಗ್ರೀನ್ ಭರ್ಜರಿ ಶತಕ: ಹೈದರಾಬಾದ್ ವಿರುದ್ಧ ಮುಂಬೈ ಜಯಭೇರಿ

ಮುಂಬೈ: ಪ್ಲೇ ಆಫ್ ತಲುಪಲು ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಿನ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿತು.

ಟಾಸ್ ಸೋತ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 200 ರನ್ ಗಳಿಸಿತು. ಈ ಬೃಹತ್​ ಮೊತ್ತದ ಟಾರ್ಗೆಟ್​ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತು 18 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 201 ರನ್​ ಗಳಿಸುವ ಮೂಲಕ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ್ಕಕೇರಿದೆ. ಈ ಮೂಲಕ ಪ್ಲೇಆಫ್​ ಹಂತಕ್ಕೆ ತಲುಪಿದರೂ ಸಹ ಆರ್​ಸಿಬಿ ತಂಡದ ಗೆಲುವು ಸೋಲಿನ ಮೇಲೆ ಮುಂಬೈ ಪ್ಲೇಆಫ್​ ಭವಿಷ್ಯ ನಿಂತಿದೆ.

ವಿವ್ರಾಂತ್ ಶರ್ಮಾ 69, ಮಯಾಂಕ್ ಅಗರ್ವಾಲ್ 83, ಕ್ಲಾಸೆನ್ 18, ಮಾರ್ಕ್ರಾಮ್ ಔಟಾಗದೆ 13 ರನ್ ಗಳಿಸಿ ತಂಡದ ಮೊತ್ತವನ್ನು 200 ಗಡಿ ದಾಟಿಸಿದರು. ಮುಂಬೈ ಪರ ಆಕಾಶ್ ಮಧ್ವಲ್ 4 ವಿಕೆಟ್ ಪಡೆದು ಗಮನ ಸೆಳೆದರು.

ಹೈದರಾಬಾದ್‌ ನೀಡಿದ ಬೃಹತ್‌ ಗುರಿ ಬೆನ್ನಟ್ಟಿದ ಮುಂಬೈ 18 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿ ಅಮೋಘ ಜಯ ದಾಖಲಿಸಿತು. ಅತ್ಯಮೋಘ ಆಟವಾಡಿದ ಕ್ಯಾಮರೂನ್ ಗ್ರೀನ್ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರು ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. 8 ಫೋರ್ಸ್‌ ಮತ್ತು 8 ಸಿಕ್ಸ್‌ ಅವರ ಇನ್ನಿಂಗ್ಸ್‌ನಲ್ಲಿ ದಾಖಲಾದವು. ಸೂರ್ಯಕುಮಾರ್ ಯಾದವ್ 25 ರನ್ ಗಳಿಸಿ ಔಟಾಗದೆ ಉಳಿದರು.

ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು, ನಾಯಕ ರೋಹಿತ್ ಶರ್ಮಾ ಸಮಯೋಚಿತ ಆಟವಾಡಿ 56 ರನ್ ಗಳಿಸಿದರು.

 

andolanait

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

6 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago