ಕ್ರೀಡೆ

ಪಂಜಾಬ್‌ ಕಿಂಗ್ಸ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ಗೆಲುವು

ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 37ನೇ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಪಂಜಾಬ್‌ ಕಿಂಗ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 142 ರನ್‌ಗಳಿಗೆ ಆಲ್‌ಔಟ್‌ ಆಗಿ ಗುಜರಾತ್‌ ಟೈಟನ್ಸ್‌ ತಂಡಕ್ಕೆ ಗೆಲ್ಲಲು 143 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ಗುಜರಾತ್‌ ಟೈಟನ್ಸ್‌ 19.1 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 146 ರನ್‌ ಕಲೆಹಾಕಿತು.

ಪಂಜಾಬ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ನಾಯಕ ಸಾಮ್‌ ಕರನ್‌ ಹಾಗೂ ಪ್ರಭ್‌ಸಿಮ್ರಾನ್ ಸಿಂಗ್‌ ಕಣಕ್ಕಿಳಿದರು. ಪ್ರಭ್‌ಸಿಮ್ರಾನ್‌ ಸಿಂಗ್‌ ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್‌ಮನ್ ಸಹ ಮೂವತ್ತರ ಗಡಿ ದಾಟದೇ ಗುಜರಾತ್‌ ಟೈಟನ್ಸ್‌ ಬೌಲಿಂಗ್‌ ದಾಳಿಗೆ ಮಂಕಾದರು. ಸಾಮ್‌ ಕರನ್‌ 20 (19) ರನ್‌ ಗಳಿಸಿದರೆ, ಪ್ರಭ್‌ಸಿಮ್ರಾನ್‌ ಸಿಂಗ್‌ 35 (21) ರನ್‌ ಗಳಿಸಿದರು. ಇನ್ನುಳಿದಂತೆ ರಿಲೇ ರೊಸ್ಸೊ 9 (7) ರನ್‌, ಜಿತೇಂದ್ರ ಶರ್ಮಾ 13 (12) ರನ್‌, ಲಿಯಾಮ್‌ ಲಿವಿಂಗ್‌ಸ್ಟನ್‌ 6 (9) ರನ್‌, ಶಶಾಂಕ್‌ ಸಿಂಗ್‌ 8 (12) ರನ್‌, ಅಶುತೋಷ್‌ ಶರ್ಮಾ 3 (8) ರನ್‌, ಹರ್‌ಪ್ರೀತ್‌ ಸಿಂಗ್‌ 14 (19) ರನ್‌, ಹರ್‌ಪ್ರೀತ್‌ ಬ್ರಾರ್‌ 29 (12) ರನ್‌, ಹರ್ಷಲ್‌ ಪಟೇಲ್‌ ಗೋಲ್ಡನ್‌ ಡಕ್‌ಔಟ್‌ ಮತ್ತು ಕಗಿಸೊ ರಬಾಡಾ ಅಜೇಯ 1 (1) ರನ್‌ ಗಳಿಸಿದರು.

ಗುಜರಾತ್‌ ಟೈಟನ್ಸ್‌ ಪರ ಸಾಯಿ ಕಿಶೋರ್‌ 4 ವಿಕೆಟ್‌, ನೂರ್‌ ಅಹ್ಮದ್‌ ಹಾಗೂ ಮೋಹಿತ್ ಶರ್ಮಾ ತಲಾ ಎರಡೆರಡು ವಿಕೆಟ್‌ ಮತ್ತು ರಶೀದ್‌ ಖಾನ್‌ 1 ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 13 (11) ರನ್‌ ಹಾಗೂ ನಾಯಕ ಶುಭ್‌ಮನ್‌ ಗಿಲ್‌ 35 (29) ರನ್‌ ಗಳಿಸಿದರು. ಇನ್ನುಳಿದಂತೆ ಸಾಯಿ ಸುದರ್ಶನ್‌ 31 (34) ರನ್‌, ಡೇವಿಡ್‌ ಮಿಲ್ಲರ್‌ 4 (6) ರನ್‌, ಅಜ್ಮತ್‌ಉಲ್ಲಾ ಒಮರ್ಜೈ 13 (10) ರನ್‌, ಶಾರುಖ್‌ ಖಾನ್‌ 8 (4) ರನ್‌, ರಶೀದ್‌ ಖಾನ್‌ 3 (3) ರನ್‌ ಗಳಿಸಿದರು ಮತ್ತು ಯಾವುದೇ ಎಸೆತ ಎದುರಿಸದ ರವಿಶ್ರೀನಿವಾಸನ್‌ ಸಾಯಿ ಕಿಶೋರ್‌ ಅಜೇಯರಾಗಿ ಉಳಿದರು. ತಂಡದ ಪರ ಕೊನೆಯ ಹಂತದವರೆಗೂ ಹೋರಾಡಿದ ರಾಹುಲ್‌ ತೆವಾಟಿಯಾ ಅಜೇಯ 36 (18) ರನ್‌ ಗಳಿಸಿದರು.

ಪಂಜಾಬ್‌ ಕಿಂಗ್ಸ್‌ ಪರ ಹರ್ಷಲ್‌ ಪಟೇಲ್‌ 3 ವಿಕೆಟ್‌, ಲಿಯಾಮ್‌ ಲಿವಿಂಗ್‌ಸ್ಟನ್‌ 2 ವಿಕೆಟ್‌, ಸಾಮ್ ಕರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

6 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

7 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

8 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

10 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

12 hours ago