ಕ್ರೀಡೆ

ನಾನು ತಿಳಿಯದೆ ನಿಷೇಧಿತ ವಸ್ತು ಸೇವಿಸಿದ್ದೆ : ಟ್ವೀಟ್‌ ಬರೆದು ​ ತಪ್ಪೊಪ್ಪಿದ ಜಿಮ್ನಾಸ್ಟ್ ದೀಪಾ ಕರ್ಮಾಕರ್

ನವದೆಹಲಿ: ಡೋಪಿಂಗ್ ಟೆಸ್ಟ್​ನಲ್ಲಿ ಅನುತ್ತೀರ್ಣರಾಗಿ​ 21 ತಿಂಗಳ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದ ಜಿಮ್ನಾಸ್ಟ್​ ದೀಪಾ ಕರ್ಮಾಕರ್ ಅವರಿಗೆ ತನ್ನ ತಪ್ಪಿನ ಅರಿವಾಗಿದ್ದು, ಗೊತ್ತಿಲ್ಲದೇ ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್​ನಲ್ಲಿ ವಿಸ್ತಾರವಾಗಿ ಬರೆದುಕೊಂಡಿರುವ ಕರ್ಮಾಕರ್, “ನಾನು ವೃತ್ತಿ ಜೀವನಕ್ಕಾಗಿ ನಡೆಸಿದ ಸುದೀರ್ಘ ಯುದ್ಧದಲ್ಲಿ ಒಂದನ್ನು ಕೊನೆಗೊಳಿಸಿದ್ದೇನೆ. 2021ರಲ್ಲಿ ನನ್ನ ಡೋಪಿಂಗ್​ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ನನ್ನ ಅರಿವಿಗೆ ಬಾರದೇ ನಿಷೇಧಿತ ಪದಾರ್ಥವನ್ನು ಸೇವಿಸಿದ್ದೆ. ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಬಂದಿದೆ. ನನ್ನ ದೇಹ ಸೇರಿದ ನಿಷೇಧಿತ ವಸ್ತುವಿನ ಮೂಲ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.”

 

ಈ ವಿಷಯ ಸೌಹಾರ್ದಯುತವಾಗಿ ಬಗೆಹರಿದಿರುವುದು ನನಗೆ ಸಂತಸ ತಂದಿದೆ. ನನ್ನ ಅಮಾನತು ಅವಧಿಯನ್ನು 3 ತಿಂಗಳು ಕಡಿಮೆ ಮಾಡಲಾಗಿದೆ. ಜುಲೈ 2023ರಲ್ಲಿ ನಾನು ಇಷ್ಟಪಡುವ ಕ್ರೀಡೆಗೆ ಮತ್ತೆ ಮರಳಲು ಅವಕಾಶವಿದೆ. ಆದರೆ ನಿಷೇಧಿತ ಪದಾರ್ಥಗಳು ನನ್ನ ದೇಹವನ್ನು ಹೇಗೆ ಪ್ರವೇಶಿಸಿದವು ಎಂಬುದು ತಿಳಿಯದಿರುವುದು ದುಃಖ ತರಿಸಿದೆ. ನನ್ನ ವೃತ್ತಿಜೀವನದಲ್ಲಿ ಎಂದಿಗೂ ಅಂತಹ ವಸ್ತುಗಳನ್ನು ಸೇವಿಸುವ ಆಲೋಚನೆಯೇ ನನಗೆ ಬಂದಿರಲಿಲ್ಲ. ಜಿಮ್ನಾಸ್ಟಿಕ್​ ನನ್ನ ರಕ್ತದಲ್ಲಿದೆ. ನಾನು ದೇಶಕ್ಕೆ ಅಪಖ್ಯಾತಿ ತರುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago