ಕ್ರೀಡೆ

ನಾನು ತಿಳಿಯದೆ ನಿಷೇಧಿತ ವಸ್ತು ಸೇವಿಸಿದ್ದೆ : ಟ್ವೀಟ್‌ ಬರೆದು ​ ತಪ್ಪೊಪ್ಪಿದ ಜಿಮ್ನಾಸ್ಟ್ ದೀಪಾ ಕರ್ಮಾಕರ್

ನವದೆಹಲಿ: ಡೋಪಿಂಗ್ ಟೆಸ್ಟ್​ನಲ್ಲಿ ಅನುತ್ತೀರ್ಣರಾಗಿ​ 21 ತಿಂಗಳ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದ ಜಿಮ್ನಾಸ್ಟ್​ ದೀಪಾ ಕರ್ಮಾಕರ್ ಅವರಿಗೆ ತನ್ನ ತಪ್ಪಿನ ಅರಿವಾಗಿದ್ದು, ಗೊತ್ತಿಲ್ಲದೇ ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್​ನಲ್ಲಿ ವಿಸ್ತಾರವಾಗಿ ಬರೆದುಕೊಂಡಿರುವ ಕರ್ಮಾಕರ್, “ನಾನು ವೃತ್ತಿ ಜೀವನಕ್ಕಾಗಿ ನಡೆಸಿದ ಸುದೀರ್ಘ ಯುದ್ಧದಲ್ಲಿ ಒಂದನ್ನು ಕೊನೆಗೊಳಿಸಿದ್ದೇನೆ. 2021ರಲ್ಲಿ ನನ್ನ ಡೋಪಿಂಗ್​ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ನನ್ನ ಅರಿವಿಗೆ ಬಾರದೇ ನಿಷೇಧಿತ ಪದಾರ್ಥವನ್ನು ಸೇವಿಸಿದ್ದೆ. ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಬಂದಿದೆ. ನನ್ನ ದೇಹ ಸೇರಿದ ನಿಷೇಧಿತ ವಸ್ತುವಿನ ಮೂಲ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.”

 

ಈ ವಿಷಯ ಸೌಹಾರ್ದಯುತವಾಗಿ ಬಗೆಹರಿದಿರುವುದು ನನಗೆ ಸಂತಸ ತಂದಿದೆ. ನನ್ನ ಅಮಾನತು ಅವಧಿಯನ್ನು 3 ತಿಂಗಳು ಕಡಿಮೆ ಮಾಡಲಾಗಿದೆ. ಜುಲೈ 2023ರಲ್ಲಿ ನಾನು ಇಷ್ಟಪಡುವ ಕ್ರೀಡೆಗೆ ಮತ್ತೆ ಮರಳಲು ಅವಕಾಶವಿದೆ. ಆದರೆ ನಿಷೇಧಿತ ಪದಾರ್ಥಗಳು ನನ್ನ ದೇಹವನ್ನು ಹೇಗೆ ಪ್ರವೇಶಿಸಿದವು ಎಂಬುದು ತಿಳಿಯದಿರುವುದು ದುಃಖ ತರಿಸಿದೆ. ನನ್ನ ವೃತ್ತಿಜೀವನದಲ್ಲಿ ಎಂದಿಗೂ ಅಂತಹ ವಸ್ತುಗಳನ್ನು ಸೇವಿಸುವ ಆಲೋಚನೆಯೇ ನನಗೆ ಬಂದಿರಲಿಲ್ಲ. ಜಿಮ್ನಾಸ್ಟಿಕ್​ ನನ್ನ ರಕ್ತದಲ್ಲಿದೆ. ನಾನು ದೇಶಕ್ಕೆ ಅಪಖ್ಯಾತಿ ತರುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago