ಕ್ರೀಡೆ

ರೋಹಿರಾಟ್‌ ತಂಡಕ್ಕಾಗಿ ಇಷ್ಟ ವರ್ಷಗಳ ಕಾಲ ಆಡಲಿದ್ದಾರೆ: ಸ್ಪಿನ್ನರ್‌ ಹರಭಜನ್‌ ಸಿಂಗ್‌

ನವದೆಹಲಿ: ಭಾರತ ತಂಡ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋತ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಭೂಗಿಲೆದ್ದಿದ್ದ ಹಲವಾರು ಊಹಾಪೋಹಗಳಿಗೆ ಮಾಜಿ ಸ್ಪಿನ್ನರ್‌ ಹರಭಜನ್‌ ಸಿಂಗ್‌ ಉತ್ತರ ನೀಡಿದ್ದಾರೆ.

ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಹಾಗೂ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ಟಿ20ಗೆ ನಿವೃತ್ತಿ ಘೋಷಸಿದ ಬಳಿಕ ಅವರು ಏಕದಿನ ಮಾದರಿಯಲ್ಲಿಯೂ ನಿವೃತ್ತಿ ಘೋಷಿಸಲಿದ್ದಾರೆ ಎಂದು ಊಹಾಪೋಹಗಳು ಹರದಾಡುತ್ತಿದ್ದವು.

ಈ ಎಲ್ಲಾ ಪ್ರಶ್ನೆಗಳಿಗೂ ಪಿಟಿಐ ಸಂದರ್ಶನದಲ್ಲಿ ಉತ್ತರ ನೀಡಿರುವ ಟೀಂ ಇಂಡಿಯಾದ ಮಾಜಿ ಸ್ಪಿನ್ನರ್‌ ಹರಭಜನ್‌ ಸಿಂಗ್‌, ರೋಹಿತ್‌ ಶರ್ಮಾ ಅವರು ಇನ್ನೆರಡು ವರ್ಷಗಳ ಕಾಲ ಅಂತರಾಷ್ಟ್ರೀಯ ಕ್ರಿಕೆಟ್‌ ಆಡಲಿದ್ದಾರೆ. ಇತ್ತ ವಿರಾಟ್‌ ಕೊಹ್ಲಿ ಅವರಿಗಿರುವ ಫಿಟ್‌ನೆಸ್‌ ಗಮನಿಸಿದರೇ ಇನ್ನ ಐದು ವರ್ಷಗಳ ಕಾಲ ಕ್ರಿಕೆಟ್‌ ಆಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರೋಹಿರಾಟ್‌ ಜೋಡಿಯಲ್ಲಿ ಇನ್ನು ಕ್ರಿಕೆಟ್‌ ಉಳಿದಿದೆ. ಇಬ್ಬರು ಸಾಕಷ್ಟು ಫಿಟ್‌ನೆಸ್‌ ಹೊಂದಿದ್ದು, ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ನನಗನಿಸುತ್ತದೆ. ಅವರಿಬ್ಬರು ಟೀಂ ಇಂಡಿಯಾ ಪರವಾಗಿ ಆಟ ಮುಂದುವರಿಸಬೇಕು ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

22 mins ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

3 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

4 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

7 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

7 hours ago