Categories: ಕ್ರೀಡೆ

ಐಪಿಎಲ್‌-2025ರ ಮೊದಲ ಪಂದ್ಯದಿಂದ ಬ್ಯಾನ್‌ ಆದ ಹಾರ್ದಿಕ್‌ ಪಾಂಡ್ಯ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರಲ್ಲಿ ಒಟ್ಟು 10 ತಂಡಗಳು ಆಡಲಿದ್ದಾವೆ. ಈ ಬಾರಿಯು ಹಾರ್ದಿಕ್‌ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಐಪಿಎಲ್‌ ಮ್ಯಾಚ್‌ಗಳಲ್ಲಿ ಕಣಕ್ಕಿಳಿಯಲಿದೆ. ಆದರೆ ನಾಯಕ ಹಾರ್ದಿಕ್‌ ಪಾಂಡ್ಯ ಮೊದಲ ಮ್ಯಾಚ್‌ನ ನಾಯಕತ್ವ ವಹಿಸಲು ಸಾಧ್ಯವಾಗುವುದಿಲ್ಲ.

ಏಕೆಂದರೆ ಕಳೆದ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಲಕ್ನೋ ಸೂಪರ್‌ ಜೈಂಟ್ಸ್‌ (2 ಬಾರಿ) ಹಾಗೂ ಪಂಜಾಬ್‌ ಕಿಂಗ್ಸ್‌ (1 ಬಾರಿ) ತಂಡದ ವಿರುದ್ಧ ಆಡಿದ ಪಂದ್ಯಗಳಲ್ಲಿ ನಿಗದಿತ ಸಮಯದಲ್ಲಿ 20 ಓವರ್‌ಗಳನ್ನು ಪೂರೈಸದ ಕಾರಣ ನಾಯಕನಿಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯ ನಿಷೇಧಿಸಲಾಗಿದೆ.

ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ ತಂಡದ ಸೀಸನ್‌ 17ರ ಕೊನೆಯ ಪಂದ್ಯವಾದ್ದರಿಂದ, ಈ ಬಾರಿಯ ಐಪಿಎಲ್‌ ಸೀಸನ್‌.18ರ ಮೊದಲ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ಕಣಕ್ಕಿಳಿಯುವ ಆಗಿಲ್ಲ. ಹೀಗಾಗಿ ಜಸ್ಪ್ರೀತ್‌ ಬುಮ್ರಾ ಅಥವಾ ಸೂರ್ಯಕುಮಾರ್‌ ಯಾದವ್‌ ಮೊದಲ ಪಂದ್ಯವನ್ನು ಮುನ್ನಡೆಸಲಿದ್ದಾರೆ.

ಇನ್ನು ಐಪಿಎಲ್‌ ನಿಯಮದ ಪ್ರಕಾರ, ಐಪಿಎಲ್‌ನಲ್ಲಿ ಆಡುವ ಪ್ರತಿ ತಂಡಗಳು 1 ಗಂಟೆ 30 ನಿಮಿಷಗಳಲ್ಲಿ ಒಂದು ಇನ್ನಿಂಗ್ಸ್‌ ಮುಗಿಸಬೇಕು. ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ, ಒಬ್ಬ ಫೀಲ್ಡರ್‌ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ತಪ್ಪು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದೇ ತಪ್ಪನ್ನು ಎರಡನೇ ಬಾರಿ ಮಾಡಿದರೆ, ನಾಯಕನಿಗೆ 24 ಲಕ್ಷ ರೂ ದಂಡ, ಜೊತೆ ಪ್ಲೇಯಿಂಗ್‌ ಇಲವೆನ್‌ನ 10 ಆಟಗಾರರಿಗೆ ತಲಾ 6 ಲಕ್ಷ ದಂಡ ಅಥವಾ ಪಂದ್ಯದ ಶೇ.25% ದಂಡ ವಿಧಿಸಲಾಗುತ್ತದೆ.

ಇದೇ ತಪ್ಪನ್ನು ಮೂರನೇ ಬಾರಿ ಪುನರಾವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯ ನಿಷೇಧಕ್ಕೆ ಒಳಗಾಗುತ್ತಾರೆ. ತಂಡದ ಉಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ದಂಡ ಅಥವಾ ಪಂದ್ಯದ ಶೇ.50ರಷ್ಟು ದಂಡ ಪಾವತಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago