Categories: ಕ್ರೀಡೆ

ಐಪಿಎಲ್‌-2025ರ ಮೊದಲ ಪಂದ್ಯದಿಂದ ಬ್ಯಾನ್‌ ಆದ ಹಾರ್ದಿಕ್‌ ಪಾಂಡ್ಯ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರಲ್ಲಿ ಒಟ್ಟು 10 ತಂಡಗಳು ಆಡಲಿದ್ದಾವೆ. ಈ ಬಾರಿಯು ಹಾರ್ದಿಕ್‌ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಐಪಿಎಲ್‌ ಮ್ಯಾಚ್‌ಗಳಲ್ಲಿ ಕಣಕ್ಕಿಳಿಯಲಿದೆ. ಆದರೆ ನಾಯಕ ಹಾರ್ದಿಕ್‌ ಪಾಂಡ್ಯ ಮೊದಲ ಮ್ಯಾಚ್‌ನ ನಾಯಕತ್ವ ವಹಿಸಲು ಸಾಧ್ಯವಾಗುವುದಿಲ್ಲ.

ಏಕೆಂದರೆ ಕಳೆದ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಲಕ್ನೋ ಸೂಪರ್‌ ಜೈಂಟ್ಸ್‌ (2 ಬಾರಿ) ಹಾಗೂ ಪಂಜಾಬ್‌ ಕಿಂಗ್ಸ್‌ (1 ಬಾರಿ) ತಂಡದ ವಿರುದ್ಧ ಆಡಿದ ಪಂದ್ಯಗಳಲ್ಲಿ ನಿಗದಿತ ಸಮಯದಲ್ಲಿ 20 ಓವರ್‌ಗಳನ್ನು ಪೂರೈಸದ ಕಾರಣ ನಾಯಕನಿಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯ ನಿಷೇಧಿಸಲಾಗಿದೆ.

ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ ತಂಡದ ಸೀಸನ್‌ 17ರ ಕೊನೆಯ ಪಂದ್ಯವಾದ್ದರಿಂದ, ಈ ಬಾರಿಯ ಐಪಿಎಲ್‌ ಸೀಸನ್‌.18ರ ಮೊದಲ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ಕಣಕ್ಕಿಳಿಯುವ ಆಗಿಲ್ಲ. ಹೀಗಾಗಿ ಜಸ್ಪ್ರೀತ್‌ ಬುಮ್ರಾ ಅಥವಾ ಸೂರ್ಯಕುಮಾರ್‌ ಯಾದವ್‌ ಮೊದಲ ಪಂದ್ಯವನ್ನು ಮುನ್ನಡೆಸಲಿದ್ದಾರೆ.

ಇನ್ನು ಐಪಿಎಲ್‌ ನಿಯಮದ ಪ್ರಕಾರ, ಐಪಿಎಲ್‌ನಲ್ಲಿ ಆಡುವ ಪ್ರತಿ ತಂಡಗಳು 1 ಗಂಟೆ 30 ನಿಮಿಷಗಳಲ್ಲಿ ಒಂದು ಇನ್ನಿಂಗ್ಸ್‌ ಮುಗಿಸಬೇಕು. ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ, ಒಬ್ಬ ಫೀಲ್ಡರ್‌ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ತಪ್ಪು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದೇ ತಪ್ಪನ್ನು ಎರಡನೇ ಬಾರಿ ಮಾಡಿದರೆ, ನಾಯಕನಿಗೆ 24 ಲಕ್ಷ ರೂ ದಂಡ, ಜೊತೆ ಪ್ಲೇಯಿಂಗ್‌ ಇಲವೆನ್‌ನ 10 ಆಟಗಾರರಿಗೆ ತಲಾ 6 ಲಕ್ಷ ದಂಡ ಅಥವಾ ಪಂದ್ಯದ ಶೇ.25% ದಂಡ ವಿಧಿಸಲಾಗುತ್ತದೆ.

ಇದೇ ತಪ್ಪನ್ನು ಮೂರನೇ ಬಾರಿ ಪುನರಾವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯ ನಿಷೇಧಕ್ಕೆ ಒಳಗಾಗುತ್ತಾರೆ. ತಂಡದ ಉಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ದಂಡ ಅಥವಾ ಪಂದ್ಯದ ಶೇ.50ರಷ್ಟು ದಂಡ ಪಾವತಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

13 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

15 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

15 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago