ಕ್ರೀಡೆ

ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಕಿಡಿಕಾರಿದ್ದಾರೆ. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ತಂಡದ ಆಟಗಾರರಿಗೆ ಸಾಮಾನ್ಯ ವ್ಯವಸ್ಥೆಗಳನ್ನೂ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಟ್ರಿನಿಡಾಡ್ ನ ಬ್ರಿಯಾನ್‌ ಲಾರಾ ಕ್ರಿಕೆಟ್‌ ಅಕಾಡೆಮಿ ಸ್ಟೇಡಿಯಂನಲ್ಲಿ ಮಂಗಳವಾರ (ಆಗಸ್ಟ್‌ 1) ನಡೆದ ಏಕದಿನ ಕ್ರಿಕೆಟ್‌ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಆಟವಾಡಿದ ಹಾರ್ದಿಕ್ ಪಾಂಡ್ಯ ಸಾರಥ್ಯದ ಭಾರತ ತಂಡ 200 ರನ್‌ಗಳ ಭಾರಿ ಅಂತರದಲ್ಲಿ ಆತಿಥೇಯ ವಿಂಡೀಸ್ ತಂಡವನ್ನು ಮಣಿಸಿ, 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಈ ಪಂದ್ಯದ ಬಳಿಕ ಮಾತನಾಡಿದ ನಾಯಕ ಪಾಂಡ್ಯ, ‘ಪ್ರವಾಸಿ ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಸಾಮಾನ್ಯ ವ್ಯವಸ್ಥೆಗಳನ್ನು ಒದಗಿಸಲು ವಿಫಲವಾಗಿರುವ ವೆಸ್ಟ್‌ ಇಂಡೀಸ್ ಕ್ರಿಕೆಟ್‌ ಮಂಡಳಿ ಸಮಸ್ಯೆಗಳನ್ನು ಈ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾವು ಆಡಿದ ಅತ್ಯುತ್ತಮ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ಇದೂ ಒಂದು. ಮುಂದಿನ ಬಾರಿ ನಾವು ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಂಡಾಗ ಪರಿಸ್ಥಿತಿಗಳು ಮತ್ತಷ್ಟು ಸುಧಾರಿಸಿರುತ್ತವೆ ಎಂದು ಭಾವಿಸುತ್ತೇನೆ. ಪ್ರಯಾಣದಿಂದ ಹಿಡಿದು ಎಲ್ಲ ಸಂಗತಿಗಳನ್ನು ನಿಭಾಯಿಸುವ ಕಡೆಗೆ ಸಾಕಷ್ಟು ಸುಧಾರಣೆ ಆಗಬೇಕಿದೆ. ಕಳೆದ ಪ್ರವಾಸದಲ್ಲಿಯೂ ಹಲವು ಸಮಸ್ಯೆಗಳು ಎದುರಾಗಿದ್ದವು. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿಗೆ ಎಚ್ಚೆತ್ತುಕೊಳ್ಳಲು ಇದು ಸರಿಯಾದ ಸಮಯ. ಇಲ್ಲಿಗೆ ಪ್ರಯಾಣ ಬೆಳೆಸುವ ತಂಡಗಳನ್ನು ಉತ್ತಮವಾಗಿ ನಡೆಸಿಕೊಳ್ಳುವ ಅಗತ್ಯವಿದೆ. ನಾವಿಲ್ಲಿ ಐಶಾರಾಮಿ ಆತಿಥ್ಯ ಎದುರು ನೋಡುತ್ತಿಲ್ಲ. ಬದಲಿಗೆ ಸರಳ ಮತ್ತು ಸಾಮಾನ್ಯ ಸಂಗತಿಗಳ ವ್ಯವಸ್ಥೆಯಾಗುವ ಅಗತ್ಯವಿದೆ. ಉಳಿದಂತೆ ಇಲ್ಲಿ ಬಂದು ಆಡುವುದು ಸಂತಸ ಹೆಚ್ಚಿಸಿದೆ ಎಂದು ಪಾಂಡ್ಯ ಹೇಳಿದ್ದಾರೆ.

ಮೂಲಗಳ ಪ್ರಕಾರ ಈ ಬಾರಿ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಭಾರತ ತಂಡ ಸಾಕಷ್ಟು ಸಮಸ್ಯೆ ಎದುರಿಸಿದೆ ಎಂದು ವರದಿಯಾಗಿದೆ. ವಿಮಾನ ವೇಳಾಪಟ್ಟಿಯಲ್ಲಿನ ಗೊಂದಲ, ತಡರಾತ್ರಿ ಪ್ರಯಾಣ ಎಲ್ಲದರಿಂದ ಆಟಗಾರರಿಗೆ ಸರಿಯಾದ ನಿದ್ರೆ ಇಲ್ಲದಂತ್ತಾಗಿ ಏಕದಿನ ಕ್ರಿಕೆಟ್‌ ಸರಣಿಗೆ ತಯಾರಿ ನಡೆಸಲು ಸಮಸ್ಯೆಯಾಗಿತ್ತು. ಈ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಬಿಸಿಸಿಐಗೆ ಕೂಡ ದೂರು ನೀಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿಲ್ಲ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago