ಕ್ರೀಡೆ

ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಕಿಡಿಕಾರಿದ್ದಾರೆ. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ತಂಡದ ಆಟಗಾರರಿಗೆ ಸಾಮಾನ್ಯ ವ್ಯವಸ್ಥೆಗಳನ್ನೂ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಟ್ರಿನಿಡಾಡ್ ನ ಬ್ರಿಯಾನ್‌ ಲಾರಾ ಕ್ರಿಕೆಟ್‌ ಅಕಾಡೆಮಿ ಸ್ಟೇಡಿಯಂನಲ್ಲಿ ಮಂಗಳವಾರ (ಆಗಸ್ಟ್‌ 1) ನಡೆದ ಏಕದಿನ ಕ್ರಿಕೆಟ್‌ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಆಟವಾಡಿದ ಹಾರ್ದಿಕ್ ಪಾಂಡ್ಯ ಸಾರಥ್ಯದ ಭಾರತ ತಂಡ 200 ರನ್‌ಗಳ ಭಾರಿ ಅಂತರದಲ್ಲಿ ಆತಿಥೇಯ ವಿಂಡೀಸ್ ತಂಡವನ್ನು ಮಣಿಸಿ, 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಈ ಪಂದ್ಯದ ಬಳಿಕ ಮಾತನಾಡಿದ ನಾಯಕ ಪಾಂಡ್ಯ, ‘ಪ್ರವಾಸಿ ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಸಾಮಾನ್ಯ ವ್ಯವಸ್ಥೆಗಳನ್ನು ಒದಗಿಸಲು ವಿಫಲವಾಗಿರುವ ವೆಸ್ಟ್‌ ಇಂಡೀಸ್ ಕ್ರಿಕೆಟ್‌ ಮಂಡಳಿ ಸಮಸ್ಯೆಗಳನ್ನು ಈ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾವು ಆಡಿದ ಅತ್ಯುತ್ತಮ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ಇದೂ ಒಂದು. ಮುಂದಿನ ಬಾರಿ ನಾವು ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಂಡಾಗ ಪರಿಸ್ಥಿತಿಗಳು ಮತ್ತಷ್ಟು ಸುಧಾರಿಸಿರುತ್ತವೆ ಎಂದು ಭಾವಿಸುತ್ತೇನೆ. ಪ್ರಯಾಣದಿಂದ ಹಿಡಿದು ಎಲ್ಲ ಸಂಗತಿಗಳನ್ನು ನಿಭಾಯಿಸುವ ಕಡೆಗೆ ಸಾಕಷ್ಟು ಸುಧಾರಣೆ ಆಗಬೇಕಿದೆ. ಕಳೆದ ಪ್ರವಾಸದಲ್ಲಿಯೂ ಹಲವು ಸಮಸ್ಯೆಗಳು ಎದುರಾಗಿದ್ದವು. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿಗೆ ಎಚ್ಚೆತ್ತುಕೊಳ್ಳಲು ಇದು ಸರಿಯಾದ ಸಮಯ. ಇಲ್ಲಿಗೆ ಪ್ರಯಾಣ ಬೆಳೆಸುವ ತಂಡಗಳನ್ನು ಉತ್ತಮವಾಗಿ ನಡೆಸಿಕೊಳ್ಳುವ ಅಗತ್ಯವಿದೆ. ನಾವಿಲ್ಲಿ ಐಶಾರಾಮಿ ಆತಿಥ್ಯ ಎದುರು ನೋಡುತ್ತಿಲ್ಲ. ಬದಲಿಗೆ ಸರಳ ಮತ್ತು ಸಾಮಾನ್ಯ ಸಂಗತಿಗಳ ವ್ಯವಸ್ಥೆಯಾಗುವ ಅಗತ್ಯವಿದೆ. ಉಳಿದಂತೆ ಇಲ್ಲಿ ಬಂದು ಆಡುವುದು ಸಂತಸ ಹೆಚ್ಚಿಸಿದೆ ಎಂದು ಪಾಂಡ್ಯ ಹೇಳಿದ್ದಾರೆ.

ಮೂಲಗಳ ಪ್ರಕಾರ ಈ ಬಾರಿ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಭಾರತ ತಂಡ ಸಾಕಷ್ಟು ಸಮಸ್ಯೆ ಎದುರಿಸಿದೆ ಎಂದು ವರದಿಯಾಗಿದೆ. ವಿಮಾನ ವೇಳಾಪಟ್ಟಿಯಲ್ಲಿನ ಗೊಂದಲ, ತಡರಾತ್ರಿ ಪ್ರಯಾಣ ಎಲ್ಲದರಿಂದ ಆಟಗಾರರಿಗೆ ಸರಿಯಾದ ನಿದ್ರೆ ಇಲ್ಲದಂತ್ತಾಗಿ ಏಕದಿನ ಕ್ರಿಕೆಟ್‌ ಸರಣಿಗೆ ತಯಾರಿ ನಡೆಸಲು ಸಮಸ್ಯೆಯಾಗಿತ್ತು. ಈ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಬಿಸಿಸಿಐಗೆ ಕೂಡ ದೂರು ನೀಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿಲ್ಲ.

andolanait

Recent Posts

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

13 mins ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

21 mins ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

30 mins ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

44 mins ago

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

2 hours ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

3 hours ago