ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಕಿಡಿಕಾರಿದ್ದಾರೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ತಂಡದ ಆಟಗಾರರಿಗೆ ಸಾಮಾನ್ಯ ವ್ಯವಸ್ಥೆಗಳನ್ನೂ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಟ್ರಿನಿಡಾಡ್ ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ಮಂಗಳವಾರ (ಆಗಸ್ಟ್ 1) ನಡೆದ ಏಕದಿನ ಕ್ರಿಕೆಟ್ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಆಟವಾಡಿದ ಹಾರ್ದಿಕ್ ಪಾಂಡ್ಯ ಸಾರಥ್ಯದ ಭಾರತ ತಂಡ 200 ರನ್ಗಳ ಭಾರಿ ಅಂತರದಲ್ಲಿ ಆತಿಥೇಯ ವಿಂಡೀಸ್ ತಂಡವನ್ನು ಮಣಿಸಿ, 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.
ಈ ಪಂದ್ಯದ ಬಳಿಕ ಮಾತನಾಡಿದ ನಾಯಕ ಪಾಂಡ್ಯ, ‘ಪ್ರವಾಸಿ ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಸಾಮಾನ್ಯ ವ್ಯವಸ್ಥೆಗಳನ್ನು ಒದಗಿಸಲು ವಿಫಲವಾಗಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಸಮಸ್ಯೆಗಳನ್ನು ಈ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
“ನಾವು ಆಡಿದ ಅತ್ಯುತ್ತಮ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಇದೂ ಒಂದು. ಮುಂದಿನ ಬಾರಿ ನಾವು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಾಗ ಪರಿಸ್ಥಿತಿಗಳು ಮತ್ತಷ್ಟು ಸುಧಾರಿಸಿರುತ್ತವೆ ಎಂದು ಭಾವಿಸುತ್ತೇನೆ. ಪ್ರಯಾಣದಿಂದ ಹಿಡಿದು ಎಲ್ಲ ಸಂಗತಿಗಳನ್ನು ನಿಭಾಯಿಸುವ ಕಡೆಗೆ ಸಾಕಷ್ಟು ಸುಧಾರಣೆ ಆಗಬೇಕಿದೆ. ಕಳೆದ ಪ್ರವಾಸದಲ್ಲಿಯೂ ಹಲವು ಸಮಸ್ಯೆಗಳು ಎದುರಾಗಿದ್ದವು. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಗೆ ಎಚ್ಚೆತ್ತುಕೊಳ್ಳಲು ಇದು ಸರಿಯಾದ ಸಮಯ. ಇಲ್ಲಿಗೆ ಪ್ರಯಾಣ ಬೆಳೆಸುವ ತಂಡಗಳನ್ನು ಉತ್ತಮವಾಗಿ ನಡೆಸಿಕೊಳ್ಳುವ ಅಗತ್ಯವಿದೆ. ನಾವಿಲ್ಲಿ ಐಶಾರಾಮಿ ಆತಿಥ್ಯ ಎದುರು ನೋಡುತ್ತಿಲ್ಲ. ಬದಲಿಗೆ ಸರಳ ಮತ್ತು ಸಾಮಾನ್ಯ ಸಂಗತಿಗಳ ವ್ಯವಸ್ಥೆಯಾಗುವ ಅಗತ್ಯವಿದೆ. ಉಳಿದಂತೆ ಇಲ್ಲಿ ಬಂದು ಆಡುವುದು ಸಂತಸ ಹೆಚ್ಚಿಸಿದೆ ಎಂದು ಪಾಂಡ್ಯ ಹೇಳಿದ್ದಾರೆ.
ಮೂಲಗಳ ಪ್ರಕಾರ ಈ ಬಾರಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ತಂಡ ಸಾಕಷ್ಟು ಸಮಸ್ಯೆ ಎದುರಿಸಿದೆ ಎಂದು ವರದಿಯಾಗಿದೆ. ವಿಮಾನ ವೇಳಾಪಟ್ಟಿಯಲ್ಲಿನ ಗೊಂದಲ, ತಡರಾತ್ರಿ ಪ್ರಯಾಣ ಎಲ್ಲದರಿಂದ ಆಟಗಾರರಿಗೆ ಸರಿಯಾದ ನಿದ್ರೆ ಇಲ್ಲದಂತ್ತಾಗಿ ಏಕದಿನ ಕ್ರಿಕೆಟ್ ಸರಣಿಗೆ ತಯಾರಿ ನಡೆಸಲು ಸಮಸ್ಯೆಯಾಗಿತ್ತು. ಈ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಬಿಸಿಸಿಐಗೆ ಕೂಡ ದೂರು ನೀಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿಲ್ಲ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…