ಕ್ರೀಡೆ

ಪುನಃ ರ‍್ಯಾಲಿಗೆ ಮರಳಿದ ಹರಿತ್ ನೋಹ್; ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಸ್ಪರ್ಧೆ

ಬೆಂಗಳೂರು : 2025 ಡಕಾರ್ ರ‍್ಯಾಲ್ಲಿ ಕೈ ಮುರಿದುಕೊಂಡು ಸ್ಪರ್ಧೆಯಿಂದ ಹೊರಗುಳಿದ ಭಾರತದ ಅಗ್ರಸ್ಥಾನದಲ್ಲಿರುವ ರ‍್ಯಾಲಿ ರೈಡರ್ ಹರಿತ್ ನೋಹ್ ಮತ್ತೆ ಸ್ಪರ್ಧೆಗೆ ಮರಳಿದ್ದಾರೆ. 2024ರ ಡಕಾರ್ ರ‍್ಯಾಲಿ ರೇಸ್ ಅನ್ನು ಗೆದ್ದಿದ್ದ ಹರಿತ್ ಇದೀಗ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಮತ್ತೆ ಪಾಲ್ಗೊಳ್ಳಲಿದ್ದಾರೆ.

ಎಫ್ಐಎ ಎಫ್ಐಎಂ ವರ್ಲ್ಡ್ ರ‍್ಯಾಲಿ-ರೇಡ್ ಚಾಂಪಿಯನ್ಶಿಪ್ (W2RC) 2025ರ ಮೂರನೇ ಸುತ್ತಾಗಿ ನಡೆಯುವ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ, ಭಾರತದ ಹರಿತ್ ನೋಹ್ ಸ್ಪರ್ಧಿಸುತ್ತಿದ್ದಾರೆ. ಮೇ 18 ರಿಂದ 24 ರವರೆಗೆ ಸನ್ ಸಿಟಿ ರಿಸಾರ್ಟ್ನಿಂದ ರ‍್ಯಾಲಿ ಆರಂಭವಾಗಲಿದೆ.

ಶೆರ್ಕೋ ಟಿವಿಎಸ್ ರ‍್ಯಾಲಿ ಫ್ಯಾಕ್ಟರಿ ತಂಡದ ಸದಸ್ಯರಾದ ಹರಿತ್, ಡಕಾರ್ 2025ರ ಪ್ರೊಲೋಗ್ ಹಂತದಲ್ಲಿ ಬಿದ್ದ ಪರಿಣಾಮ ಕೈ ಮುರಿದುಕೊಂಡಿದ್ದರು, ಆ ಹಂತವನ್ನು ಪೂರ್ಣಗೊಳಿಸಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹರಿತ್ ಈಗ, ನಾಲ್ಕು ತಿಂಗಳ ಚಿಕಿತ್ಸೆಯ ನಂತರ ಮತ್ತೆ ಸ್ಪರ್ಧೆಗೆ ಮರಳಿದ್ದು, 2026ರ ಡಕಾರ್ ರ‍್ಯಾಲಿ ತೀವ್ರ ಪೈಪೋಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಹರಿತ್ ‘ಡಕಾರ್ನ ನಂತರ ನಾನೊಂದು ವಿಶ್ರಾಂತಿ ತೆಗೆದುಕೊಂಡೆ, ಆದರೆ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಮತ್ತು ನಾನು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಈ ರೇಸ್ ನನ್ನ ಪುನಃಪ್ರವೇಶ, ಆದ್ದರಿಂದ ಸ್ವಲ್ಪ ಆತಂಕ ಇದ್ದೇ ಇರುತ್ತದೆ, ಅದು ಸಹಜ. ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿ ಎಲ್ಲರಿಗೂ ಹೊಸದು, ಮಾರ್ಗವು ಎಲ್ಲರಿಗೂ ಅಪರಿಚಿತ. ಪ್ರತಿಯೊಂದು ಕಿಲೋಮೀಟರ್ ಅನ್ನು ಗಮನದಿಂದ ತೆಗೆದುಕೊಳ್ಳುವುದು ನನ್ನ ತಂತ್ರ’ ಎಂದು ಹೇಳಿದ್ದಾರೆ.

ಹರಿತ್ ನೋಹ್ ಅವರ ಈ ಮರಳಿಕೆಯು ವೈಯಕ್ತಿಕ ಸಾಧನೆಗೆ ಮಾತ್ರವಲ್ಲ, ಭಾರತೀಯ ಮೋಟಾರ್ಸ್ಪೋರ್ಟಿಗೂ ಮಹತ್ವದ್ದಾಗಿದೆ. ಇಂತಹ ವಿಶ್ವಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಪಾಲ್ಗೊಳ್ಳುವುದು, ದೇಶದ
ರ‍್ಯಾಲಿ-ರೇಡ್ ಸ್ಪರ್ಧೆಯ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡಯ್ಯುತ್ತದೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

3 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

4 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

5 hours ago