ಕ್ರೀಡೆ

ಪುನಃ ರ‍್ಯಾಲಿಗೆ ಮರಳಿದ ಹರಿತ್ ನೋಹ್; ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಸ್ಪರ್ಧೆ

ಬೆಂಗಳೂರು : 2025 ಡಕಾರ್ ರ‍್ಯಾಲ್ಲಿ ಕೈ ಮುರಿದುಕೊಂಡು ಸ್ಪರ್ಧೆಯಿಂದ ಹೊರಗುಳಿದ ಭಾರತದ ಅಗ್ರಸ್ಥಾನದಲ್ಲಿರುವ ರ‍್ಯಾಲಿ ರೈಡರ್ ಹರಿತ್ ನೋಹ್ ಮತ್ತೆ ಸ್ಪರ್ಧೆಗೆ ಮರಳಿದ್ದಾರೆ. 2024ರ ಡಕಾರ್ ರ‍್ಯಾಲಿ ರೇಸ್ ಅನ್ನು ಗೆದ್ದಿದ್ದ ಹರಿತ್ ಇದೀಗ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಮತ್ತೆ ಪಾಲ್ಗೊಳ್ಳಲಿದ್ದಾರೆ.

ಎಫ್ಐಎ ಎಫ್ಐಎಂ ವರ್ಲ್ಡ್ ರ‍್ಯಾಲಿ-ರೇಡ್ ಚಾಂಪಿಯನ್ಶಿಪ್ (W2RC) 2025ರ ಮೂರನೇ ಸುತ್ತಾಗಿ ನಡೆಯುವ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ, ಭಾರತದ ಹರಿತ್ ನೋಹ್ ಸ್ಪರ್ಧಿಸುತ್ತಿದ್ದಾರೆ. ಮೇ 18 ರಿಂದ 24 ರವರೆಗೆ ಸನ್ ಸಿಟಿ ರಿಸಾರ್ಟ್ನಿಂದ ರ‍್ಯಾಲಿ ಆರಂಭವಾಗಲಿದೆ.

ಶೆರ್ಕೋ ಟಿವಿಎಸ್ ರ‍್ಯಾಲಿ ಫ್ಯಾಕ್ಟರಿ ತಂಡದ ಸದಸ್ಯರಾದ ಹರಿತ್, ಡಕಾರ್ 2025ರ ಪ್ರೊಲೋಗ್ ಹಂತದಲ್ಲಿ ಬಿದ್ದ ಪರಿಣಾಮ ಕೈ ಮುರಿದುಕೊಂಡಿದ್ದರು, ಆ ಹಂತವನ್ನು ಪೂರ್ಣಗೊಳಿಸಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹರಿತ್ ಈಗ, ನಾಲ್ಕು ತಿಂಗಳ ಚಿಕಿತ್ಸೆಯ ನಂತರ ಮತ್ತೆ ಸ್ಪರ್ಧೆಗೆ ಮರಳಿದ್ದು, 2026ರ ಡಕಾರ್ ರ‍್ಯಾಲಿ ತೀವ್ರ ಪೈಪೋಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಹರಿತ್ ‘ಡಕಾರ್ನ ನಂತರ ನಾನೊಂದು ವಿಶ್ರಾಂತಿ ತೆಗೆದುಕೊಂಡೆ, ಆದರೆ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಮತ್ತು ನಾನು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಈ ರೇಸ್ ನನ್ನ ಪುನಃಪ್ರವೇಶ, ಆದ್ದರಿಂದ ಸ್ವಲ್ಪ ಆತಂಕ ಇದ್ದೇ ಇರುತ್ತದೆ, ಅದು ಸಹಜ. ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿ ಎಲ್ಲರಿಗೂ ಹೊಸದು, ಮಾರ್ಗವು ಎಲ್ಲರಿಗೂ ಅಪರಿಚಿತ. ಪ್ರತಿಯೊಂದು ಕಿಲೋಮೀಟರ್ ಅನ್ನು ಗಮನದಿಂದ ತೆಗೆದುಕೊಳ್ಳುವುದು ನನ್ನ ತಂತ್ರ’ ಎಂದು ಹೇಳಿದ್ದಾರೆ.

ಹರಿತ್ ನೋಹ್ ಅವರ ಈ ಮರಳಿಕೆಯು ವೈಯಕ್ತಿಕ ಸಾಧನೆಗೆ ಮಾತ್ರವಲ್ಲ, ಭಾರತೀಯ ಮೋಟಾರ್ಸ್ಪೋರ್ಟಿಗೂ ಮಹತ್ವದ್ದಾಗಿದೆ. ಇಂತಹ ವಿಶ್ವಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಪಾಲ್ಗೊಳ್ಳುವುದು, ದೇಶದ
ರ‍್ಯಾಲಿ-ರೇಡ್ ಸ್ಪರ್ಧೆಯ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡಯ್ಯುತ್ತದೆ.

ಆಂದೋಲನ ಡೆಸ್ಕ್

Recent Posts

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

7 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

21 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

33 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

1 hour ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

2 hours ago