ಕ್ರೀಡೆ

ಪುನಃ ರ‍್ಯಾಲಿಗೆ ಮರಳಿದ ಹರಿತ್ ನೋಹ್; ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಸ್ಪರ್ಧೆ

ಬೆಂಗಳೂರು : 2025 ಡಕಾರ್ ರ‍್ಯಾಲ್ಲಿ ಕೈ ಮುರಿದುಕೊಂಡು ಸ್ಪರ್ಧೆಯಿಂದ ಹೊರಗುಳಿದ ಭಾರತದ ಅಗ್ರಸ್ಥಾನದಲ್ಲಿರುವ ರ‍್ಯಾಲಿ ರೈಡರ್ ಹರಿತ್ ನೋಹ್ ಮತ್ತೆ ಸ್ಪರ್ಧೆಗೆ ಮರಳಿದ್ದಾರೆ. 2024ರ ಡಕಾರ್ ರ‍್ಯಾಲಿ ರೇಸ್ ಅನ್ನು ಗೆದ್ದಿದ್ದ ಹರಿತ್ ಇದೀಗ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಮತ್ತೆ ಪಾಲ್ಗೊಳ್ಳಲಿದ್ದಾರೆ.

ಎಫ್ಐಎ ಎಫ್ಐಎಂ ವರ್ಲ್ಡ್ ರ‍್ಯಾಲಿ-ರೇಡ್ ಚಾಂಪಿಯನ್ಶಿಪ್ (W2RC) 2025ರ ಮೂರನೇ ಸುತ್ತಾಗಿ ನಡೆಯುವ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ, ಭಾರತದ ಹರಿತ್ ನೋಹ್ ಸ್ಪರ್ಧಿಸುತ್ತಿದ್ದಾರೆ. ಮೇ 18 ರಿಂದ 24 ರವರೆಗೆ ಸನ್ ಸಿಟಿ ರಿಸಾರ್ಟ್ನಿಂದ ರ‍್ಯಾಲಿ ಆರಂಭವಾಗಲಿದೆ.

ಶೆರ್ಕೋ ಟಿವಿಎಸ್ ರ‍್ಯಾಲಿ ಫ್ಯಾಕ್ಟರಿ ತಂಡದ ಸದಸ್ಯರಾದ ಹರಿತ್, ಡಕಾರ್ 2025ರ ಪ್ರೊಲೋಗ್ ಹಂತದಲ್ಲಿ ಬಿದ್ದ ಪರಿಣಾಮ ಕೈ ಮುರಿದುಕೊಂಡಿದ್ದರು, ಆ ಹಂತವನ್ನು ಪೂರ್ಣಗೊಳಿಸಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹರಿತ್ ಈಗ, ನಾಲ್ಕು ತಿಂಗಳ ಚಿಕಿತ್ಸೆಯ ನಂತರ ಮತ್ತೆ ಸ್ಪರ್ಧೆಗೆ ಮರಳಿದ್ದು, 2026ರ ಡಕಾರ್ ರ‍್ಯಾಲಿ ತೀವ್ರ ಪೈಪೋಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಹರಿತ್ ‘ಡಕಾರ್ನ ನಂತರ ನಾನೊಂದು ವಿಶ್ರಾಂತಿ ತೆಗೆದುಕೊಂಡೆ, ಆದರೆ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಮತ್ತು ನಾನು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಈ ರೇಸ್ ನನ್ನ ಪುನಃಪ್ರವೇಶ, ಆದ್ದರಿಂದ ಸ್ವಲ್ಪ ಆತಂಕ ಇದ್ದೇ ಇರುತ್ತದೆ, ಅದು ಸಹಜ. ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿ ಎಲ್ಲರಿಗೂ ಹೊಸದು, ಮಾರ್ಗವು ಎಲ್ಲರಿಗೂ ಅಪರಿಚಿತ. ಪ್ರತಿಯೊಂದು ಕಿಲೋಮೀಟರ್ ಅನ್ನು ಗಮನದಿಂದ ತೆಗೆದುಕೊಳ್ಳುವುದು ನನ್ನ ತಂತ್ರ’ ಎಂದು ಹೇಳಿದ್ದಾರೆ.

ಹರಿತ್ ನೋಹ್ ಅವರ ಈ ಮರಳಿಕೆಯು ವೈಯಕ್ತಿಕ ಸಾಧನೆಗೆ ಮಾತ್ರವಲ್ಲ, ಭಾರತೀಯ ಮೋಟಾರ್ಸ್ಪೋರ್ಟಿಗೂ ಮಹತ್ವದ್ದಾಗಿದೆ. ಇಂತಹ ವಿಶ್ವಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಪಾಲ್ಗೊಳ್ಳುವುದು, ದೇಶದ
ರ‍್ಯಾಲಿ-ರೇಡ್ ಸ್ಪರ್ಧೆಯ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡಯ್ಯುತ್ತದೆ.

ಆಂದೋಲನ ಡೆಸ್ಕ್

Recent Posts

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

31 mins ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

1 hour ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

3 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

3 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

4 hours ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

5 hours ago