ಕ್ರೀಡೆ

ಪುನಃ ರ‍್ಯಾಲಿಗೆ ಮರಳಿದ ಹರಿತ್ ನೋಹ್; ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಸ್ಪರ್ಧೆ

ಬೆಂಗಳೂರು : 2025 ಡಕಾರ್ ರ‍್ಯಾಲ್ಲಿ ಕೈ ಮುರಿದುಕೊಂಡು ಸ್ಪರ್ಧೆಯಿಂದ ಹೊರಗುಳಿದ ಭಾರತದ ಅಗ್ರಸ್ಥಾನದಲ್ಲಿರುವ ರ‍್ಯಾಲಿ ರೈಡರ್ ಹರಿತ್ ನೋಹ್ ಮತ್ತೆ ಸ್ಪರ್ಧೆಗೆ ಮರಳಿದ್ದಾರೆ. 2024ರ ಡಕಾರ್ ರ‍್ಯಾಲಿ ರೇಸ್ ಅನ್ನು ಗೆದ್ದಿದ್ದ ಹರಿತ್ ಇದೀಗ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಮತ್ತೆ ಪಾಲ್ಗೊಳ್ಳಲಿದ್ದಾರೆ.

ಎಫ್ಐಎ ಎಫ್ಐಎಂ ವರ್ಲ್ಡ್ ರ‍್ಯಾಲಿ-ರೇಡ್ ಚಾಂಪಿಯನ್ಶಿಪ್ (W2RC) 2025ರ ಮೂರನೇ ಸುತ್ತಾಗಿ ನಡೆಯುವ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ, ಭಾರತದ ಹರಿತ್ ನೋಹ್ ಸ್ಪರ್ಧಿಸುತ್ತಿದ್ದಾರೆ. ಮೇ 18 ರಿಂದ 24 ರವರೆಗೆ ಸನ್ ಸಿಟಿ ರಿಸಾರ್ಟ್ನಿಂದ ರ‍್ಯಾಲಿ ಆರಂಭವಾಗಲಿದೆ.

ಶೆರ್ಕೋ ಟಿವಿಎಸ್ ರ‍್ಯಾಲಿ ಫ್ಯಾಕ್ಟರಿ ತಂಡದ ಸದಸ್ಯರಾದ ಹರಿತ್, ಡಕಾರ್ 2025ರ ಪ್ರೊಲೋಗ್ ಹಂತದಲ್ಲಿ ಬಿದ್ದ ಪರಿಣಾಮ ಕೈ ಮುರಿದುಕೊಂಡಿದ್ದರು, ಆ ಹಂತವನ್ನು ಪೂರ್ಣಗೊಳಿಸಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹರಿತ್ ಈಗ, ನಾಲ್ಕು ತಿಂಗಳ ಚಿಕಿತ್ಸೆಯ ನಂತರ ಮತ್ತೆ ಸ್ಪರ್ಧೆಗೆ ಮರಳಿದ್ದು, 2026ರ ಡಕಾರ್ ರ‍್ಯಾಲಿ ತೀವ್ರ ಪೈಪೋಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಹರಿತ್ ‘ಡಕಾರ್ನ ನಂತರ ನಾನೊಂದು ವಿಶ್ರಾಂತಿ ತೆಗೆದುಕೊಂಡೆ, ಆದರೆ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಮತ್ತು ನಾನು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಈ ರೇಸ್ ನನ್ನ ಪುನಃಪ್ರವೇಶ, ಆದ್ದರಿಂದ ಸ್ವಲ್ಪ ಆತಂಕ ಇದ್ದೇ ಇರುತ್ತದೆ, ಅದು ಸಹಜ. ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿ ಎಲ್ಲರಿಗೂ ಹೊಸದು, ಮಾರ್ಗವು ಎಲ್ಲರಿಗೂ ಅಪರಿಚಿತ. ಪ್ರತಿಯೊಂದು ಕಿಲೋಮೀಟರ್ ಅನ್ನು ಗಮನದಿಂದ ತೆಗೆದುಕೊಳ್ಳುವುದು ನನ್ನ ತಂತ್ರ’ ಎಂದು ಹೇಳಿದ್ದಾರೆ.

ಹರಿತ್ ನೋಹ್ ಅವರ ಈ ಮರಳಿಕೆಯು ವೈಯಕ್ತಿಕ ಸಾಧನೆಗೆ ಮಾತ್ರವಲ್ಲ, ಭಾರತೀಯ ಮೋಟಾರ್ಸ್ಪೋರ್ಟಿಗೂ ಮಹತ್ವದ್ದಾಗಿದೆ. ಇಂತಹ ವಿಶ್ವಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಪಾಲ್ಗೊಳ್ಳುವುದು, ದೇಶದ
ರ‍್ಯಾಲಿ-ರೇಡ್ ಸ್ಪರ್ಧೆಯ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡಯ್ಯುತ್ತದೆ.

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

6 mins ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

10 mins ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

17 mins ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

22 mins ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

27 mins ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

34 mins ago