ಕ್ರೀಡೆ

ಪುನಃ ರ‍್ಯಾಲಿಗೆ ಮರಳಿದ ಹರಿತ್ ನೋಹ್; ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಸ್ಪರ್ಧೆ

ಬೆಂಗಳೂರು : 2025 ಡಕಾರ್ ರ‍್ಯಾಲ್ಲಿ ಕೈ ಮುರಿದುಕೊಂಡು ಸ್ಪರ್ಧೆಯಿಂದ ಹೊರಗುಳಿದ ಭಾರತದ ಅಗ್ರಸ್ಥಾನದಲ್ಲಿರುವ ರ‍್ಯಾಲಿ ರೈಡರ್ ಹರಿತ್ ನೋಹ್ ಮತ್ತೆ ಸ್ಪರ್ಧೆಗೆ ಮರಳಿದ್ದಾರೆ. 2024ರ ಡಕಾರ್ ರ‍್ಯಾಲಿ ರೇಸ್ ಅನ್ನು ಗೆದ್ದಿದ್ದ ಹರಿತ್ ಇದೀಗ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಮತ್ತೆ ಪಾಲ್ಗೊಳ್ಳಲಿದ್ದಾರೆ.

ಎಫ್ಐಎ ಎಫ್ಐಎಂ ವರ್ಲ್ಡ್ ರ‍್ಯಾಲಿ-ರೇಡ್ ಚಾಂಪಿಯನ್ಶಿಪ್ (W2RC) 2025ರ ಮೂರನೇ ಸುತ್ತಾಗಿ ನಡೆಯುವ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ, ಭಾರತದ ಹರಿತ್ ನೋಹ್ ಸ್ಪರ್ಧಿಸುತ್ತಿದ್ದಾರೆ. ಮೇ 18 ರಿಂದ 24 ರವರೆಗೆ ಸನ್ ಸಿಟಿ ರಿಸಾರ್ಟ್ನಿಂದ ರ‍್ಯಾಲಿ ಆರಂಭವಾಗಲಿದೆ.

ಶೆರ್ಕೋ ಟಿವಿಎಸ್ ರ‍್ಯಾಲಿ ಫ್ಯಾಕ್ಟರಿ ತಂಡದ ಸದಸ್ಯರಾದ ಹರಿತ್, ಡಕಾರ್ 2025ರ ಪ್ರೊಲೋಗ್ ಹಂತದಲ್ಲಿ ಬಿದ್ದ ಪರಿಣಾಮ ಕೈ ಮುರಿದುಕೊಂಡಿದ್ದರು, ಆ ಹಂತವನ್ನು ಪೂರ್ಣಗೊಳಿಸಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹರಿತ್ ಈಗ, ನಾಲ್ಕು ತಿಂಗಳ ಚಿಕಿತ್ಸೆಯ ನಂತರ ಮತ್ತೆ ಸ್ಪರ್ಧೆಗೆ ಮರಳಿದ್ದು, 2026ರ ಡಕಾರ್ ರ‍್ಯಾಲಿ ತೀವ್ರ ಪೈಪೋಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಹರಿತ್ ‘ಡಕಾರ್ನ ನಂತರ ನಾನೊಂದು ವಿಶ್ರಾಂತಿ ತೆಗೆದುಕೊಂಡೆ, ಆದರೆ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಮತ್ತು ನಾನು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಈ ರೇಸ್ ನನ್ನ ಪುನಃಪ್ರವೇಶ, ಆದ್ದರಿಂದ ಸ್ವಲ್ಪ ಆತಂಕ ಇದ್ದೇ ಇರುತ್ತದೆ, ಅದು ಸಹಜ. ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿ ಎಲ್ಲರಿಗೂ ಹೊಸದು, ಮಾರ್ಗವು ಎಲ್ಲರಿಗೂ ಅಪರಿಚಿತ. ಪ್ರತಿಯೊಂದು ಕಿಲೋಮೀಟರ್ ಅನ್ನು ಗಮನದಿಂದ ತೆಗೆದುಕೊಳ್ಳುವುದು ನನ್ನ ತಂತ್ರ’ ಎಂದು ಹೇಳಿದ್ದಾರೆ.

ಹರಿತ್ ನೋಹ್ ಅವರ ಈ ಮರಳಿಕೆಯು ವೈಯಕ್ತಿಕ ಸಾಧನೆಗೆ ಮಾತ್ರವಲ್ಲ, ಭಾರತೀಯ ಮೋಟಾರ್ಸ್ಪೋರ್ಟಿಗೂ ಮಹತ್ವದ್ದಾಗಿದೆ. ಇಂತಹ ವಿಶ್ವಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಪಾಲ್ಗೊಳ್ಳುವುದು, ದೇಶದ
ರ‍್ಯಾಲಿ-ರೇಡ್ ಸ್ಪರ್ಧೆಯ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡಯ್ಯುತ್ತದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

47 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

1 hour ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

22 hours ago