ಕ್ರೀಡೆ

ಪುನಃ ರ‍್ಯಾಲಿಗೆ ಮರಳಿದ ಹರಿತ್ ನೋಹ್; ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಸ್ಪರ್ಧೆ

ಬೆಂಗಳೂರು : 2025 ಡಕಾರ್ ರ‍್ಯಾಲ್ಲಿ ಕೈ ಮುರಿದುಕೊಂಡು ಸ್ಪರ್ಧೆಯಿಂದ ಹೊರಗುಳಿದ ಭಾರತದ ಅಗ್ರಸ್ಥಾನದಲ್ಲಿರುವ ರ‍್ಯಾಲಿ ರೈಡರ್ ಹರಿತ್ ನೋಹ್ ಮತ್ತೆ ಸ್ಪರ್ಧೆಗೆ ಮರಳಿದ್ದಾರೆ. 2024ರ ಡಕಾರ್ ರ‍್ಯಾಲಿ ರೇಸ್ ಅನ್ನು ಗೆದ್ದಿದ್ದ ಹರಿತ್ ಇದೀಗ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ ಮತ್ತೆ ಪಾಲ್ಗೊಳ್ಳಲಿದ್ದಾರೆ.

ಎಫ್ಐಎ ಎಫ್ಐಎಂ ವರ್ಲ್ಡ್ ರ‍್ಯಾಲಿ-ರೇಡ್ ಚಾಂಪಿಯನ್ಶಿಪ್ (W2RC) 2025ರ ಮೂರನೇ ಸುತ್ತಾಗಿ ನಡೆಯುವ ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿಯಲ್ಲಿ, ಭಾರತದ ಹರಿತ್ ನೋಹ್ ಸ್ಪರ್ಧಿಸುತ್ತಿದ್ದಾರೆ. ಮೇ 18 ರಿಂದ 24 ರವರೆಗೆ ಸನ್ ಸಿಟಿ ರಿಸಾರ್ಟ್ನಿಂದ ರ‍್ಯಾಲಿ ಆರಂಭವಾಗಲಿದೆ.

ಶೆರ್ಕೋ ಟಿವಿಎಸ್ ರ‍್ಯಾಲಿ ಫ್ಯಾಕ್ಟರಿ ತಂಡದ ಸದಸ್ಯರಾದ ಹರಿತ್, ಡಕಾರ್ 2025ರ ಪ್ರೊಲೋಗ್ ಹಂತದಲ್ಲಿ ಬಿದ್ದ ಪರಿಣಾಮ ಕೈ ಮುರಿದುಕೊಂಡಿದ್ದರು, ಆ ಹಂತವನ್ನು ಪೂರ್ಣಗೊಳಿಸಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹರಿತ್ ಈಗ, ನಾಲ್ಕು ತಿಂಗಳ ಚಿಕಿತ್ಸೆಯ ನಂತರ ಮತ್ತೆ ಸ್ಪರ್ಧೆಗೆ ಮರಳಿದ್ದು, 2026ರ ಡಕಾರ್ ರ‍್ಯಾಲಿ ತೀವ್ರ ಪೈಪೋಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಹರಿತ್ ‘ಡಕಾರ್ನ ನಂತರ ನಾನೊಂದು ವಿಶ್ರಾಂತಿ ತೆಗೆದುಕೊಂಡೆ, ಆದರೆ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಮತ್ತು ನಾನು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಈ ರೇಸ್ ನನ್ನ ಪುನಃಪ್ರವೇಶ, ಆದ್ದರಿಂದ ಸ್ವಲ್ಪ ಆತಂಕ ಇದ್ದೇ ಇರುತ್ತದೆ, ಅದು ಸಹಜ. ದಕ್ಷಿಣ ಆಫ್ರಿಕಾದ ಸಫಾರಿ ರ‍್ಯಾಲಿ ಎಲ್ಲರಿಗೂ ಹೊಸದು, ಮಾರ್ಗವು ಎಲ್ಲರಿಗೂ ಅಪರಿಚಿತ. ಪ್ರತಿಯೊಂದು ಕಿಲೋಮೀಟರ್ ಅನ್ನು ಗಮನದಿಂದ ತೆಗೆದುಕೊಳ್ಳುವುದು ನನ್ನ ತಂತ್ರ’ ಎಂದು ಹೇಳಿದ್ದಾರೆ.

ಹರಿತ್ ನೋಹ್ ಅವರ ಈ ಮರಳಿಕೆಯು ವೈಯಕ್ತಿಕ ಸಾಧನೆಗೆ ಮಾತ್ರವಲ್ಲ, ಭಾರತೀಯ ಮೋಟಾರ್ಸ್ಪೋರ್ಟಿಗೂ ಮಹತ್ವದ್ದಾಗಿದೆ. ಇಂತಹ ವಿಶ್ವಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಪಾಲ್ಗೊಳ್ಳುವುದು, ದೇಶದ
ರ‍್ಯಾಲಿ-ರೇಡ್ ಸ್ಪರ್ಧೆಯ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡಯ್ಯುತ್ತದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago