ಕ್ರೀಡೆ

ಅಂಪೈರ್ ವಿರುದ್ಧ ಕಿಡಿಕಾರಿದ ಆರೋಪ: ಹರ್ಮನ್​ಪ್ರೀತ್‌ ಗೆ ಭಾರೀ ದಂಡ ವಿಧಿಸಿದ ಐಸಿಸಿ

ಬಾಂಗ್ಲಾದೇಶ : ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಂಪೈರ್ ನೀಡಿದ್ದ ನಿರ್ಣಯದ ವಿರುದ್ಧ ಮೈದಾನದಲ್ಲಿ ಅಸಮಾಧಾನ ಹೊರಹಾಕಿದ್ದು ಸಾಲದೆಂಬಂತೆ, ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್​ನಲ್ಲಿ ಅಂಪೈರಿಂಗ್ ವಿರುದ್ಧ ಕಿಡಿಕಾರಿದ್ದ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ ಐಸಿಸಿ ಭಾರಿ ದಂಡ ವಿಧಿಸಿದೆ.

ಹರ್ಮನ್ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿರುವ ಐಸಿಸಿ (ICC), ಕೌರ್ ಅವರ ಪಂದ್ಯ ಶುಲ್ಕದಲ್ಲಿ ಶೇ.75ರಷ್ಟು ಹಣವನ್ನು ದಂಡವಾಗಿ ಕಡಿತಗೊಳಿಸಿದೆ ಎಂದು ವರದಿಯಾಗಿದೆ.

ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಮನ್‌ಪ್ರೀತ್ ಅಂಪೈರಿಂಗ್ ಅನ್ನು ಪ್ರಶ್ನಿಸಿದ್ದಲ್ಲದೆ, ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದು ತಮ್ಮ ಆಕ್ರೋಶ ಹೊರಹಾಕಿದ್ದರು. ಇದೀಗ ಕೌರ್ ವರ್ತನೆಯ ಬಗ್ಗೆ ಮ್ಯಾಚ್ ರೆಫರಿ ಐಸಿಸಿಗೆ ವರದಿ ನೀಡಿದ್ದು, ನಿಯಮದ ಪ್ರಕಾರ ಹರ್ಮನ್‌ಪ್ರೀತ್ ಕೌರ್ ಲೆವೆಲ್ 2 ರಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ.

ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯವು ಜುಲೈ 22 ರಂದು ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಉಭಯ ತಂಡಗಳ ನಡುವೆ ನಡೆದ ಪಂದ್ಯ ಟೈ ಆಗಿದ್ದು, ನಂತರ ಎರಡೂ ತಂಡವನ್ನು ಜಂಟಿಯಾಗಿ ಸರಣಿ ವಿಜೇತರೆಂದು ಘೋಷಿಸಲಾಯಿತು.

ಕೋಪದಲ್ಲಿ ಹರ್ಮನ್‌ಪ್ರೀತ್ ಮಾಡಿದ್ದೇನು?

ಪಂದ್ಯದ ವೇಳೆ ಹರ್ಮನ್‌ಪ್ರೀತ್ ಕೌರ್ ವಿರುದ್ಧ ಬಾಂಗ್ಲಾ ತಂಡ ಕ್ಯಾಚ್ ಔಟ್​ಗೆ ಮನವಿ ಮಾಡಿತು. ಬಾಂಗ್ಲಾ ತಂಡದ ಮನವಿ ಪುರಸ್ಕರಿಸಿದ ಅಂಪೈರ್, ಔಟೆಂದು ನಿರ್ಣಯ ನೀಡಿದರು. ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನಿಂದ ಕೋಪಗೊಂಡ ಕೌರ್, ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದರು. ಇದಾದ ಬಳಿಕ ಅಂಪೈರ್ ತನ್ವೀರ್ ಅಹ್ಮದ್ ಜತೆ ವಾಗ್ವಾದಕ್ಕಿಳಿದರು. ಅಷ್ಟೇ ಅಲ್ಲದೆ ಪಂದ್ಯದ ನಂತರವೂ ಅಂಪೈರ್ ಮತ್ತು ಅವರ ನಿರ್ಧಾರಗಳ ಮೇಲೆ ಪ್ರಶ್ನೆಗಳನ್ನು ಎತ್ತಿದರು.

ಯಾವುದಕ್ಕೆ ಎಷ್ಟು ದಂಡ?

ಸಿಕ್ಕಿರುವ ಮಾಹಿತಿಯ ಪ್ರಕಾರ, ಹರ್ಮನ್‌ಪ್ರೀತ್‌ ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದಿದ್ದಕ್ಕಾಗಿ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ಕಡಿತಗೊಳಿಸಲಾಗಿದೆ. ಹಾಗೆಯೇ ಪಂದ್ಯ ಮುಗಿದ ಬಳಿಕ ತೋರಿದ ವರ್ತನೆಗೆ ಪಂದ್ಯ ಶುಲ್ಕದ 25 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ ಎಂದು ವರದಿಯಾಗಿದೆ.

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

6 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

9 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

10 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

11 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

16 hours ago