ಕ್ರೀಡೆ

ಅಂಪೈರ್ ವಿರುದ್ಧ ಕಿಡಿಕಾರಿದ ಆರೋಪ: ಹರ್ಮನ್​ಪ್ರೀತ್‌ ಗೆ ಭಾರೀ ದಂಡ ವಿಧಿಸಿದ ಐಸಿಸಿ

ಬಾಂಗ್ಲಾದೇಶ : ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಂಪೈರ್ ನೀಡಿದ್ದ ನಿರ್ಣಯದ ವಿರುದ್ಧ ಮೈದಾನದಲ್ಲಿ ಅಸಮಾಧಾನ ಹೊರಹಾಕಿದ್ದು ಸಾಲದೆಂಬಂತೆ, ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್​ನಲ್ಲಿ ಅಂಪೈರಿಂಗ್ ವಿರುದ್ಧ ಕಿಡಿಕಾರಿದ್ದ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ ಐಸಿಸಿ ಭಾರಿ ದಂಡ ವಿಧಿಸಿದೆ.

ಹರ್ಮನ್ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿರುವ ಐಸಿಸಿ (ICC), ಕೌರ್ ಅವರ ಪಂದ್ಯ ಶುಲ್ಕದಲ್ಲಿ ಶೇ.75ರಷ್ಟು ಹಣವನ್ನು ದಂಡವಾಗಿ ಕಡಿತಗೊಳಿಸಿದೆ ಎಂದು ವರದಿಯಾಗಿದೆ.

ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಮನ್‌ಪ್ರೀತ್ ಅಂಪೈರಿಂಗ್ ಅನ್ನು ಪ್ರಶ್ನಿಸಿದ್ದಲ್ಲದೆ, ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದು ತಮ್ಮ ಆಕ್ರೋಶ ಹೊರಹಾಕಿದ್ದರು. ಇದೀಗ ಕೌರ್ ವರ್ತನೆಯ ಬಗ್ಗೆ ಮ್ಯಾಚ್ ರೆಫರಿ ಐಸಿಸಿಗೆ ವರದಿ ನೀಡಿದ್ದು, ನಿಯಮದ ಪ್ರಕಾರ ಹರ್ಮನ್‌ಪ್ರೀತ್ ಕೌರ್ ಲೆವೆಲ್ 2 ರಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ.

ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯವು ಜುಲೈ 22 ರಂದು ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಉಭಯ ತಂಡಗಳ ನಡುವೆ ನಡೆದ ಪಂದ್ಯ ಟೈ ಆಗಿದ್ದು, ನಂತರ ಎರಡೂ ತಂಡವನ್ನು ಜಂಟಿಯಾಗಿ ಸರಣಿ ವಿಜೇತರೆಂದು ಘೋಷಿಸಲಾಯಿತು.

ಕೋಪದಲ್ಲಿ ಹರ್ಮನ್‌ಪ್ರೀತ್ ಮಾಡಿದ್ದೇನು?

ಪಂದ್ಯದ ವೇಳೆ ಹರ್ಮನ್‌ಪ್ರೀತ್ ಕೌರ್ ವಿರುದ್ಧ ಬಾಂಗ್ಲಾ ತಂಡ ಕ್ಯಾಚ್ ಔಟ್​ಗೆ ಮನವಿ ಮಾಡಿತು. ಬಾಂಗ್ಲಾ ತಂಡದ ಮನವಿ ಪುರಸ್ಕರಿಸಿದ ಅಂಪೈರ್, ಔಟೆಂದು ನಿರ್ಣಯ ನೀಡಿದರು. ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನಿಂದ ಕೋಪಗೊಂಡ ಕೌರ್, ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದರು. ಇದಾದ ಬಳಿಕ ಅಂಪೈರ್ ತನ್ವೀರ್ ಅಹ್ಮದ್ ಜತೆ ವಾಗ್ವಾದಕ್ಕಿಳಿದರು. ಅಷ್ಟೇ ಅಲ್ಲದೆ ಪಂದ್ಯದ ನಂತರವೂ ಅಂಪೈರ್ ಮತ್ತು ಅವರ ನಿರ್ಧಾರಗಳ ಮೇಲೆ ಪ್ರಶ್ನೆಗಳನ್ನು ಎತ್ತಿದರು.

ಯಾವುದಕ್ಕೆ ಎಷ್ಟು ದಂಡ?

ಸಿಕ್ಕಿರುವ ಮಾಹಿತಿಯ ಪ್ರಕಾರ, ಹರ್ಮನ್‌ಪ್ರೀತ್‌ ಬ್ಯಾಟ್‌ನಿಂದ ವಿಕೆಟ್‌ಗೆ ಹೊಡೆದಿದ್ದಕ್ಕಾಗಿ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ಕಡಿತಗೊಳಿಸಲಾಗಿದೆ. ಹಾಗೆಯೇ ಪಂದ್ಯ ಮುಗಿದ ಬಳಿಕ ತೋರಿದ ವರ್ತನೆಗೆ ಪಂದ್ಯ ಶುಲ್ಕದ 25 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ ಎಂದು ವರದಿಯಾಗಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago