ಕ್ರೀಡೆ

ವಿಶೇಷ ರೀತಿಯಲ್ಲಿ ವಿನೇಶ್‌ ಅವರನ್ನು ಸ್ವಾಗತಿಸಲಿದೆ ಹರ್ಯಾಣ ಸರ್ಕಾರ

ಹರ್ಯಾಣ: ಪ್ಯಾರಿಸ್‌ ಒಲಂಪಿಕ್ಸ್‌ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್‌ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್‌ ಫೋಗಟ್‌ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.

ಈ ಸಂಬಂಧ ಹರ್ಯಾಣದ ಸಿಎಂ ನಯಾಬ್‌ ಸಿಂಗ್‌ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಮ್ಮ ವೀರ ಮಗಳು ಹರ್ಯಾಣದ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದರು. ಕೆಲವು ಕಾರಣಗಳಿಂದ ಅವರು ಒಲಿಂಪಿಕ್ ಫೈನಲ್‌ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು ಆದರೆ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ಒಲಂಪಿಕ್ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುವುದು. ಹಾಗೂ ನಮ್ಮ ಸರ್ಕಾರವು ಪದಕ ವಿಜೇತರಂತೆ ವಿನೇಶ್‌ ಅವರನ್ನು ಸ್ವಾಗತಿಸಲು ನಿರ್ಧರಿಸಿದೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ವಿನೇಶ್! ಎಂದು ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

16 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

3 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

3 hours ago