ಕ್ರೀಡೆ

ವಿಶೇಷ ರೀತಿಯಲ್ಲಿ ವಿನೇಶ್‌ ಅವರನ್ನು ಸ್ವಾಗತಿಸಲಿದೆ ಹರ್ಯಾಣ ಸರ್ಕಾರ

ಹರ್ಯಾಣ: ಪ್ಯಾರಿಸ್‌ ಒಲಂಪಿಕ್ಸ್‌ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್‌ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್‌ ಫೋಗಟ್‌ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.

ಈ ಸಂಬಂಧ ಹರ್ಯಾಣದ ಸಿಎಂ ನಯಾಬ್‌ ಸಿಂಗ್‌ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಮ್ಮ ವೀರ ಮಗಳು ಹರ್ಯಾಣದ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದರು. ಕೆಲವು ಕಾರಣಗಳಿಂದ ಅವರು ಒಲಿಂಪಿಕ್ ಫೈನಲ್‌ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು ಆದರೆ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ಒಲಂಪಿಕ್ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುವುದು. ಹಾಗೂ ನಮ್ಮ ಸರ್ಕಾರವು ಪದಕ ವಿಜೇತರಂತೆ ವಿನೇಶ್‌ ಅವರನ್ನು ಸ್ವಾಗತಿಸಲು ನಿರ್ಧರಿಸಿದೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ವಿನೇಶ್! ಎಂದು ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

22 mins ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

23 mins ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

43 mins ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

57 mins ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

5 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

6 hours ago