ಹರ್ಯಾಣ: ಪ್ಯಾರಿಸ್ ಒಲಂಪಿಕ್ಸ್ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ಹರ್ಯಾಣದ ಸಿಎಂ ನಯಾಬ್ ಸಿಂಗ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಮ್ಮ ವೀರ ಮಗಳು ಹರ್ಯಾಣದ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿ ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ್ದರು. ಕೆಲವು ಕಾರಣಗಳಿಂದ ಅವರು ಒಲಿಂಪಿಕ್ ಫೈನಲ್ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು ಆದರೆ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಂದುವರಿದು, ಒಲಂಪಿಕ್ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುವುದು. ಹಾಗೂ ನಮ್ಮ ಸರ್ಕಾರವು ಪದಕ ವಿಜೇತರಂತೆ ವಿನೇಶ್ ಅವರನ್ನು ಸ್ವಾಗತಿಸಲು ನಿರ್ಧರಿಸಿದೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ವಿನೇಶ್! ಎಂದು ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…