ಹರ್ಯಾಣ: ಪ್ಯಾರಿಸ್ ಒಲಂಪಿಕ್ಸ್ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ ಸಲ್ಲಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ಹರ್ಯಾಣದ ಸಿಎಂ ನಯಾಬ್ ಸಿಂಗ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಮ್ಮ ವೀರ ಮಗಳು ಹರ್ಯಾಣದ ವಿನೇಶ್ ಫೋಗಟ್ ಅದ್ಭುತ ಪ್ರದರ್ಶನ ನೀಡಿ ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ್ದರು. ಕೆಲವು ಕಾರಣಗಳಿಂದ ಅವರು ಒಲಿಂಪಿಕ್ ಫೈನಲ್ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು ಆದರೆ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಂದುವರಿದು, ಒಲಂಪಿಕ್ ಬೆಳ್ಳಿ ಪದಕ ವಿಜೇತರಿಗೆ ಹರಿಯಾಣ ಸರ್ಕಾರ ನೀಡುವ ಎಲ್ಲಾ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುವುದು. ಹಾಗೂ ನಮ್ಮ ಸರ್ಕಾರವು ಪದಕ ವಿಜೇತರಂತೆ ವಿನೇಶ್ ಅವರನ್ನು ಸ್ವಾಗತಿಸಲು ನಿರ್ಧರಿಸಿದೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ವಿನೇಶ್! ಎಂದು ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…